ಲೆಕ್ಕದಲ್ಲಿ ಪರ್ಫೆಕ್ಟ್ ಎಂದು ತೋರಿಸಿದ ಸಿಎಂ ಸಿದ್ದರಾಮಯ್ಯ

Krishnaveni K
ಸೋಮವಾರ, 23 ಸೆಪ್ಟಂಬರ್ 2024 (10:35 IST)
ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣದ ವೇಳೆ ಅವರು ತಾವು ಲೆಕ್ಕದಲ್ಲಿ ಪರ್ಫೆಕ್ಟ್ ಎಂದು ಸಾಬೀತು ಪಡಿಸಿದರು.

ತುಂಗಭದ್ರ ಅಣೆಕಟ್ಟೆಯಿಂದ ಯಾವ ರಾಜ್ಯದ ಎಷ್ಟು ಎಕರೆ ಪ್ರದೇಶಕ್ಕೆ ನೀರು ಒದಗಿಸಲಾಗುತ್ತಿದೆ ಎನ್ನುವ ಬಗ್ಗೆ ಅಂಕಿ ಅಂಶ ಸಮೇತ ವಿವರಿಸಿದರು. ಎಡ ಮತ್ತು ಬಲ ದಂಡೆಯಲ್ಲಿ ಎಷ್ಟೆಷ್ಟು ಎಕರೆಗೆ ನೀರುಣಿಸಲಾಗುತ್ತಿದೆ ಎನ್ನುವ ಅಂಕಿ ಅಂಶ ಕೂಡ ಹೇಳಿದರು.

ಈ ವೇಳೆ ವೇದಿಕೆಯಲ್ಲಿದ್ದ ಕೆಲವರು ಬೇರೆ ಅಂಕಿ ಅಂಶ ಹೇಳಿ ಅವರನ್ನು ತಿದ್ದಲು ಯತ್ನಿಸಿದರು. ಆದರೆ,  ಎಲ್ಲರು ಕೊಟ್ಟ ಅಂಕಿ ಅಂಶಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಗಳು ಬಳಿಕ ಇಲಾಖೆ ಮುಖ್ಯಸ್ಥರನ್ನು ಕರೆದು ದಾಖಲೆ ತರಿಸಿಕೊಂಡರು.

ದಾಖಲೆಗಳ ಪ್ರಕಾರ ಮೊದಲಿಗೆ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದ ಅಂಕಿ ಅಂಶಗಳು, ಕೊಟ್ಟ ಲೆಕ್ಕವೇ ಸರಿಯಾಗಿತ್ತು. ಬಳಿಕ ಮುಖ್ಯಮಂತ್ರಿಗಳು ಸಭಿಕರ ಕಡೆಗೆ (ಥಂಬ್ಸ್ ಅಪ್) ತೋರಿಸಿ ನನ್ನ ಲೆಕ್ಕವೇ perfect ಎಂದರು. ಜನರು ಶಿಳ್ಳೆ ಹಾಕಿ ಸಂಭ್ರಮಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments