Select Your Language

Notifications

webdunia
webdunia
webdunia
webdunia

ವೈದ್ಯರ ಜೊತೆ ಸಿಎಂ ಸಿದ್ದರಾಮಯ್ಯ ಖಾದರ್ ಮಧ್ಯಸ್ಥಿಕೆಯಲ್ಲಿ ಸಭೆ

ವೈದ್ಯರ ಜೊತೆ ಸಿಎಂ ಸಿದ್ದರಾಮಯ್ಯ ಖಾದರ್ ಮಧ್ಯಸ್ಥಿಕೆಯಲ್ಲಿ ಸಭೆ
ಬೆಂಗಳೂರು , ಮಂಗಳವಾರ, 28 ಅಕ್ಟೋಬರ್ 2014 (10:34 IST)
ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ನಡೆಯುವ ವೈದ್ಯರ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದಾರೆ. ವಿಧಾನಸೌಧದಲ್ಲಿ ಬೆಳಿಗ್ಗೆ 11 ಗಂಟೆಗೆ ಸಭೆಯನ್ನು ಆರೋಗ್ಯ ಸಚಿವ ಯು.ಟಿ.ಖಾದರ್ ಮಧ್ಯಸ್ಥಿಕೆಯಲ್ಲಿ ಸಿಂ ನಡೆಸಲಿದ್ದಾರೆ. ವೈದ್ಯರು ಮಂಡಿಸಿರುವ 4 ಬೇಡಿಕೆಗಳ ಬಗ್ಗೆ ವೈದ್ಯರ ಜೊತೆ ಸಿಎಂ ಚರ್ಚೆ ನಡೆಸಲಿದ್ದಾರೆ. ಬೇಡಿಕೆ ಬಗ್ಗೆ ಸಿಎಂ ಸಮ್ಮುಖದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಸಂಘದ ಅಧ್ಯಕ್ಷ ವೀರಭದ್ರಯ್ಯ ಸೇರಿ ಹಲವಾರು ಮಂದಿ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಏತನ್ಮಧ್ಯೆ ವೈದ್ಯರ ಸಾಮೂಹಿಕ ರಾಜೀನಾಮೆಯ ಎಫೆಕ್ಟ್ ಅನೇಕ ಆಸ್ಪತ್ರೆಗಳಲ್ಲಿ ಉಂಟಾಗುತ್ತಿದ್ದು, ಚಿತ್ರದುರ್ಗ ಭರಮಸಾಗರ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ಬಳಿಕ ಚಿಕಿತ್ಸೆ ಸಿಗದೇ ನವಜಾತಶಿಶು ಮೃತಪಟ್ಟಿದೆ.

ಸಕಲೇಶಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಹೃದಯಾಘಾತಕ್ಕೊಳಗಾಗಿದ್ದ ಬಾಬೂಜಿ ಎಂಬ ವ್ಯಕ್ತಿ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದೇ ರೋಗಿಗಳು ಆಸ್ಪತ್ರೆ ಆವರಣದಲ್ಲೇ ನರಳಾಡುತ್ತಾ ಮಲಗಿದ ದೃಶ್ಯಗಳು ಅನೇಕ ಕಡೆ ಕಂಡುಬಂದಿದೆ. 

Share this Story:

Follow Webdunia kannada