ಮಾಂಸದೂಟ ಮಾಡಿ ಮಠಕ್ಕೆ ಹೋದ್ರಾ ಎಂದರೆ ಸಿಟ್ಟಾದ ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 9 ಫೆಬ್ರವರಿ 2024 (08:20 IST)
ಬೆಂಗಳೂರು: ಸುತ್ತೂರು ಮಠಕ್ಕೆ ಭೇಟಿ ನೀಡುವಾಗ ಸಿಎಂ ಸಿದ್ದರಾಮಯ್ಯ ಮಾಂಸದೂಟ ಮಾಡಿ ಹೋಗಿದ್ದರು ಎಂದು ಬಿಜೆಪಿ ಆರೋಪಿಸಿದ್ದು ಸಿಎಂ ಸಿದ್ದು ಮೇಲೆ ಹೊಸ ಆರೋಪದ ಕಿಡಿ ಹತ್ತಿಕೊಂಡಿದೆ.

ಮೊನ್ನೆ ದೆಹಲಿಯಲ್ಲಿ ಪ್ರತಿಭಟನೆ ಬಳಿಕ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ತೆರಳಿ ಸಿಎಂ ಸಿದ್ದರಾಮಯ್ಯ ಬಾಡೂಟ ಸೇವಿಸಿದ್ದರು. ಅದಾದ ಬಳಿಕ ನೇರವಾಗಿ ಅವರು ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.  ಸುತ್ತೂರು ಜಾತ್ರೆಗೆ ಭೇಟಿ ನೀಡಿ ಗದ್ದುಗೆ ಭೇಟಿ ನೀಡಿದ್ದು ಸರಿಯಲ್ಲ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಸಿಎಂ ಸಿದ್ದರಾಮಯ್ಯ ಗರಂ
ಘಟನೆ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಗರಂ ಆದರು. ಊಟ, ತಿಂಡಿ, ಬಟ್ಟೆ ಹಾಕೋದರ ಬಗ್ಗೆ ಮಾತನಾಡೋಕ್ಕಾಗುತ್ತಾ? ಬಡವರ ಸಮಸ್ಯೆ, ನಿರುದ್ಯೋಗದ ಬಗ್ಗೆ ಎಲ್ಲಾ ಮಾತನಾಡೋಣ ಎಂದು ಗರಂ ಆಗಿ ಪ್ರತಿಕ್ರಿಯಿಸಿದರು.

ಆದರೆ ಸಿದ್ದರಾಮಯ್ಯ ಈ ರೀತಿ ಮಾಂಸಾಹಾರ ಸೇವಿಸಿ ದೇವಾಲಯಕ್ಕೆ ಭೇಟಿ ನೀಡಿದ ಆರೋಪ ಎದುರಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೊಮ್ಮೆ ಧರ್ಮಸ್ಥಳಕ್ಕೆ ನಾನ್ ವೆಜ್ ಸೇವಿಸಿ ಹೋಗಿದ್ದರೆಂದು ಭಾರೀ ವಿವಾದಕ್ಕೀಡಾಗಿದ್ದರು. ಈಗ ಮತ್ತೆ ಅದೇ ಆಪಾದನೆ ಸುತ್ತಿಕೊಂಡಿದೆ.

ಬಿಜೆಪಿ ನಾಯಕ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದು, ಇದು ಬಹಳ ದುರದೃಷ್ಟಕರ. ಒಬ್ಬ ಮುಖ್ಯಮಂತ್ರಿಯಾಗಿದ್ದುಕೊಂಡು ತನ್ನ ಸ್ಥಾನ ಮರೆತು ನಡೆದುಕೊಳ್ಳುತ್ತಿದ್ದಾರೆ. ಅವರಿಗೆ ವೈಯಕ್ತಿಕವಾಗಿ ದೇವರ ಬಗ್ಗೆ ಎಷ್ಟು ಭಕ್ತಿ ಭಾವನೆ ಇಟ್ಟುಕೊಂಡಿದ್ದಾರೆ ಎಂಬುದು ಬೇರೆ ಮಾತು. ಆದರೆ ಮು್ಖ್ಯಮಂತ್ರಿಗಳ ನಡೆಯನ್ನು ಸಮಾಜ ಗಮನಿಸುತ್ತದೆ. ಮುಖ್ಯಮಂತ್ರಿಯಾಗಿದ್ದುಕೊಂಡು ಜನರ ಭಾವನೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments