Webdunia - Bharat's app for daily news and videos

Install App

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಸಿಎಂ ಸಮ್ಮತಿ: ಮಾತುಕತೆ ಯಶಸ್ವಿ

Webdunia
ಸೋಮವಾರ, 10 ಏಪ್ರಿಲ್ 2017 (12:28 IST)
ಅಂಗನವಾಡಿ ಕಾರ್ಯಕರ್ತೆಯರ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಮಾತುಕತೆ ಫಲಪ್ರದವಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ವೇತನ 1 ಸಾವಿರ ರೂ. ಮತ್ತು ಸಹಾಯಕಿಯರ ವೇತನ 500 ರೂ. ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ. ಬಜೆಟ್`ನಲ್ಲಿ 1 ಸಾವಿರ ರೂ. ಹೆಚ್ಚಿಗೆ ಮಾಡಲಾಗಿತ್ತು. ಇದೀಗ, ಮತ್ತೆ 1 ಸಾವಿರ ರೂ. ಹೆಚ್ಚಳಕ್ಕೆ ಸಿಎಂ ಸಮ್ಮತಿಸಿದ್ದಾರೆ.
 

ವೇತನ ಪರಿಷ್ಕರಣೆ ಬಳಿಕ ಅಂಗನವಾಡಿ ಕಾರ್ಯಕರ್ತೆಯರ ವೇತನ 6ರಿಂದ 8 ಸಾವಿರ ರೂಪಾಯಿಗೆ ಮತ್ತು ಸಹಾಯಕಿಯರ ವೇತನ 3500 ರೂ.ನಿಂದ 4000ಕ್ಕೆ ಏರಿಕೆಯಾಗಲಿದೆ.

ಸಭೆಯಲ್ಲಿ ಸಕರಾತ್ಮಕ ನಿರ್ಧಾರ ಕೈಗೊಳ್ಳಲಾಗಿದೆ. 10 ಸಾವಿರ ರೂ. ಗೌರವಧನ, ಅಂಗನವಾಡಿಯಲ್ಲಿ ಎಲ್`ಕೆಜಿ, ಯುಕೇಜಿ ಸ್ಥಾಪನೆಗೂ ಬೇಡಿಕೆ ಇಟ್ಟಿದ್ದೆವು. ಒಟ್ಟು 2 ಸಾವಿರ ಹೆಚ್ಚಳಕ್ಕೆ ಸಿಎಂ ಸಮ್ಮತಿ ಸೂಚಿಸಿದ್ದಾರೆ. ಸರ್ವಿಸ್ ರೂಲ್ಸ್`ಗೆ ಸಮಿತಿ ರಚನೆಗೆ ನಿರ್ಧರಿಸಲಾಗಿದ್ದು, ಶೇ.50ರಷ್ಟು ನಮ್ಮ ಹೋರಾಟ ಯಶಸ್ವಿಯಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ವರಲಕ್ಷ್ಮೀ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments