Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ- ಜಗದೀಶ್ ಶೆಟ್ಟರ್ ನಡುವೆ ಟಾಕ್ ಫೈಟ್

ಸಿಎಂ ಸಿದ್ದರಾಮಯ್ಯ- ಜಗದೀಶ್ ಶೆಟ್ಟರ್ ನಡುವೆ ಟಾಕ್ ಫೈಟ್
ಬೆಂಗಳೂರು , ಬುಧವಾರ, 15 ನವೆಂಬರ್ 2017 (14:04 IST)
ಮಹದಾಯಿ ಸಮಸ್ಯೆ ಇತ್ಯರ್ಥಿ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್‌ರತ್ತ ಬೆರಳು ತೋರಿ ಬಾಲ್ ಈಸ್ ಇನ್ ಯೂವರ್ ಕೋರ್ಟ್ ಎಂದು ನೀಡಿದ ಹೇಳಿಕೆಯನ್ನು ಕಾಂಗ್ರೆಸ್ ಸದಸ್ಯರು ಸ್ವಾಗತಿಸಿದರು.
ಅಧಿವೇಶನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೋವಾ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಸರಕಾರವಿರುವುದರಿಂದ ಬಿಜೆಪಿ ನಾಯಕರು ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು. ಕೇವಲ ಹೇಳಿಕೆ ನೀಡುವುದರಿಂದ ಯೋಜನೆ ಜಾರಿ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
 
ಬಿಜೆಪಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮುಂದಿನ ತಿಂಗಳಲ್ಲಿ ಸಿಹಿ ಸುದ್ದಿ ದೊರೆಯಲಿದೆ ಎಂದು ಹೇಳುತ್ತಾರೆ. ಇಷ್ಟು ದಿನಗಳ ಕಾಲ ಬಿಜೆಪಿ ನಾಯಕರು ಯಾಕೆ ಮೌನವಾಗಿದ್ದರು. ಯಾಕೆ ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸಲಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
 
ರಾಜ್ಯ ಸರಕಾರ, ಪ್ರಧಾನಿ ಮೋದಿಯವರ ಬಳಿ ಎರಡು ಬಾರಿ ನಿಯೋಗ ತೆಗೆದುಕೊಂಡು ಹೋಗಿದೆ. ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದೆ. ಆದರೆ, ಬಿಜೆಪಿ ನಾಯಕರು ಮಾತ್ರ ಮಹದಾಯಿ ಯೋಜನೆ ಜಾರಿಗೆ ಸ್ಪಂದಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಹದಾಯಿ ಸಮಸ್ಯೆ ಎತ್ತಲು ಬಿಜೆಪಿ ಶಾಸಕರ ಹಿಂದೇಟು