Webdunia - Bharat's app for daily news and videos

Install App

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ತಪ್ಪೇ ಮಾಡಿಲ್ಲ, ಮಾಡಿದ್ದೆಲ್ಲಾ ಅಧಿಕಾರಿಗಳು: ಲೋಕಾಯುಕ್ತ ವರದಿ

Krishnaveni K
ಗುರುವಾರ, 23 ಜನವರಿ 2025 (11:34 IST)
ಬೆಂಗಳೂರು: ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಈ ಪ್ರಕರಣದಲ್ಲಿ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಎಂದು ವರದಿ ನೀಡಿದೆ.

ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಸೈಟು ನೀಡಲಾಗಿದೆ ಎಂದು ಆರೋಪವಾಗಿತ್ತು. ಈ ಬಗ್ಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಈ ಪ್ರಕರಣವನ್ನು ಲೋಕಾಯುಕ್ತ ತನಿಖೆ ನಡೆಸಿದ್ದು ವರದಿ ಸಿದ್ಧಪಡಿಸಿದೆ.

ಇದೀಗ ವರದಿಯಲ್ಲಿ ಸಿಎಂ ಮತ್ತು ಪತ್ನಿಗೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಕೋರ್ಟ್ ಗೆ ಸಲ್ಲಿಸಲಿದ್ದಾರೆ. ಪ್ರಕರಣದಲ್ಲಿ ಸಿದ್ದರಾಮಯ್ಯು ಮತ್ತು ಪತ್ನಿ ಪ್ರಭಾವ ಬಳಸಿ ಅಕ್ರಮ ಮಾಡಿಲ್ಲ. ಅದಕ್ಕೆ ಯಾವುದೇ ದಾಖಲೆ ಕಂಡುಬಂದಿಲ್ಲ ಎಂದು ಲೋಕಾಯುಕ್ತ ವರದಿ ನೀಡಿದೆ.

ಆದರೆ ಪ್ರಕರಣದಲ್ಲಿ ತಪ್ಪಾಗಿಲ್ಲ ಎಂದಲ್ಲ. ಈ ಪ್ರಕರಣದಲ್ಲಿ ಮುಡಾ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಎಂದು ಲೋಕಾಯುಕ್ತ ವರದಿ ನೀಡಿದೆ. ಇದರ ಬಗ್ಗೆ ಪ್ರತಿಕ್ರಿಯಿಸಿರುವ ಸ್ನೇಹಮಯಿ ಕೃಷ್ಣ ನನ್ನ ಬಳಿಯಿರುವ ದಾಖಲೆಗಳಿಂದಲೇ ಸಿಎಂಗೆ ಶಿಕ್ಷೆ ಕೊಡಿಸುತ್ತೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Terror Attack: ಸಚಿವ ಜಮೀರ್ ಅಹ್ಮದ್ ಪ್ರತಿಕ್ರಿಯೆ ಹೀಗಿತ್ತು

Pehalgam Terror Attack: ಪ್ರತೀಕಾರದ ಮುನ್ಸೂಚನೆ ಕೊಟ್ಟ ಅಮಿತ್ ಶಾ

Pehalgam Terror Attack Effect: ಶ್ರೀನಗರದಿಂದ ವಿಮಾನ ಟಿಕೆಟ್ ದರದಲ್ಲಿ ಭಾರೀ ಏರಿಕೆ

Namma Metro:ತಂಬಾಕು ತಿನ್ನುವವರು ಮೆಟ್ರೋದಲ್ಲಿ ಹೋಗುವಾಗ ಹುಷಾರು, ಬೀಳುತ್ತೇ ದಂಡ

Muttappa Rai Son:ಗುಂಡೇಟಿನಿಂದ ಗಾಯಗೊಂಡಿರುವ ರಿಕ್ಕಿ ರೈ ಆರೋಗ್ಯ ವಿಚಾರಿಸಿದ ಡಿಸಿಎಂ ಶಿವಕುಮಾರ್‌

ಮುಂದಿನ ಸುದ್ದಿ
Show comments