Webdunia - Bharat's app for daily news and videos

Install App

ಗಣೇಶ ಮೆರವಣಿಗೆ ಗಲಾಟೆ ಬಗ್ಗೆ ಕೇಳಿದ್ದಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯ

Krishnaveni K
ಶನಿವಾರ, 21 ಸೆಪ್ಟಂಬರ್ 2024 (11:20 IST)
ಬೆಂಗಳೂರು: ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ನಡೆದ ಕೋಮುಗಲಭೆಗಳ ಬಗ್ಗೆ ಪ್ರಶ್ನಿಸಿದಾಗ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಮೇಲೆ ಗರಂ ಆದ ಘಟನೆ ನಡೆದಿದೆ.

ಮೊದಲು ನಾಗಮಂಗಲದಲ್ಲಿ ಮತ್ತು ನಂತರ ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕೋಮುಗಲಭೆಯಾಗಿತ್ತು. ಬೆಳಗಾವಿಯಲ್ಲೂ ಸಣ್ಣ ಮಟ್ಟಿನ ಪ್ರತಿಭಟನೆ ಕಂಡುಬಂದಿತ್ತು. ಈ ಗಲಾಟೆಗಳ ಬಗ್ಗೆ ಮಾಧ್ಯಮಗಳು ಸಿಎಂ ಸಿದ್ದರಾಮಯ್ಯನವರನ್ನು ಪ್ರಶ್ನಿಸಿದಾಗ ಅವರು ಕೊಂಚ ಗರಂ ಆದರು.

ಇತ್ತೀಚೆಗೆ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆಗಳ ಬಗ್ಗೆ ಏನು ಹೇಳ್ತೀರಿ ಎಂದಾಗ ಗರಂ ಆದ ಸಿಎಂ ಸಿದ್ದು, ‘ರಾಜ್ಯದಲ್ಲಿ ಎಷ್ಟು ಗಣೇಶ ಮೂರ್ತಿಗಳಿತ್ತಯ್ಯಾ? ಸುಮಾರು 40 ಸಾವಿರ ಮೂರ್ತಿಗಳನ್ನಿಟ್ಟಿದ್ರು. ಅದರಲ್ಲಿ ಗಲಭೆಯಾಗಿದ್ದು ಕೇವಲ ಎರಡು ಕಡೆ ಮಾತ್ರ. ಒಂದು ನಾಗಮಮಂಗಲದಲ್ಲಿ ಇನ್ನೊಂದು ದಾವಣಗೆರೆಯಲ್ಲಿ. ದಾವಣಗೆರೆಯಲ್ಲಿ ಬರೀ ಕಲ್ಲು ತೂರಾಟ ಆಗಿತ್ತಷ್ಟೇ. ಆದರೆ ನೀವು ಎಲ್ಲಾ ಕಡೆ ಗಲಾಟೆ ಆಗಿದೆ ಎನ್ನುವ ಹಾಗೆ ಪ್ರಶ್ನಿಸುತ್ತಿದ್ದೀರಿ. ಎರಡು ಗಲಭೆ ಪ್ರಕರಣ ಅಂತ ಮಾತ್ರ ಹೇಳಿ’ ಎಂದು ಸಿದ್ದರಾಮಯ್ಯ ಗರಂ ಆಗಿ ಪ್ರತಿಕ್ರಿಯಿಸಿದರು.

‘ಬಳಿಕ ಈ ಎಲ್ಲಾ ಘಟನೆಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಂತೆ ಪೊಲೀಸರಿಗೆ ಫ್ರೀ ಹ್ಯಾಂಡ್ ಕೊಟ್ಟಿದ್ದೇವೆ. ಅವರು ಎಲ್ಲಾ ಮಾಡ್ತಾರೆ’ ಎಂದಿದ್ದಾರೆ. ಇನ್ನು ಈ ಗಲಭೆ ವಿಚಾರವನ್ನು ಬಿಜೆಪಿಯವರು ದೊಡ್ಡದು ಮಾಡುತ್ತಿದ್ದಾರೆ ಎಂದು ಸಿದ್ದು ಹೇಳಿದ್ದಾರೆ.

ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಅದಕ್ಕೇ ಎರಡು ಕೋಮುಗಲಭೆಯನ್ನೇ ದೊಡ್ಡ ವಿಚಾರ, ರಾಜ್ಯದಲ್ಲಿ ಶಾಂತಿ ಹಾಳಾಗಿದೆ ಎಂದೆಲ್ಲಾ ಸುಳ್ಳು ಹಬ್ಬಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments