Select Your Language

Notifications

webdunia
webdunia
webdunia
webdunia

ಬೌರಿಂಗ್ ಆಸ್ಪತ್ರೆ ಕಂಪೌಂಡ್ ಕುಸಿತಕ್ಕೆ ನೀಡಿದ ಕಾರಣ ಕೇಳಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ

Siddaramaiah
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ನಿನ್ನೆ ಸಂಜೆ ಸಂಭವಿಸಿದ ಕಂಪೌಂಡ್ ಕುಸಿತಕ್ಕೆ ಎಂಜಿನಿಯರ್ ಗಳು ನೀಡಿದ ಕಾರಣ ಕೇಳಿ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ.

ನಿನ್ನೆ ಘಟನೆ ನಡೆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್ ಆಸ್ಪತ್ರೆ ಬಳಿ ಕಂಪೌಂಡ್ ಕುಸಿದು 7 ಮಂದಿ ಸಾವನ್ನಪ್ಪಿದ್ದರು. ಹಲವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆ ಸಂಜೆಯೇ ಸಿಎಂ ಸ್ಥಳಕ್ಕೆ ಭೇಟಿ ನೀಡಿ ಕಂಪೌಂಡ್ ಕುಸಿತಕ್ಕೆ ಕಾರಣವೇನೆಂದು ಕೇಳಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಎಂಜಿನಿಯರ್ ಕಂಪೌಂಡ್ ಹಿಂದೆ ಹಾಕಲಾಗಿದ್ದ ಮಣ್ಣಿನ ರಾಶಿಯಿಂದಾಗಿ ಒತ್ತಡ ತಾಳಲಾರದೇ ಕುಸಿದು ಬಿದ್ದಿದೆ ಎಂದರು. ಈ ವೇಳೆ ಸಿಎಂ ಗರಂ ಆದರು.

ಮಣ್ಣಿನ ರಾಶಿ ತೆರವು ಮಾಡಲು ಸೂಚಿಸಿದ್ದೀರಾ ಎಂದು ಅಧಿಕಾರಿಗಳನ್ನು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ಮಣ್ಣಿನ ರಾಶಿ ಹಾಕಿದ್ದು ಯಾರು ಎಂದು ತನಿಖೆ ಮಾಡಿ ತಕ್ಕ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಇರಾನ್ ಜೊತೆಗೆ ಯುದ್ಧ ಮುಂದುವರಿಸಲು ಡೊನಾಲ್ಡ್ ಟ್ರಂಪ್ ಗೆ ಎದುರಾಗಿದೆ ದೊಡ್ಡ ಸಂಕಷ್ಟ