ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್

Krishnaveni K
ಗುರುವಾರ, 4 ಡಿಸೆಂಬರ್ 2025 (15:16 IST)
ಬೆಂಗಳೂರು: ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಾಸ್ಟರ್ ಸ್ಟ್ರೋಕ್ ಇದು ಎಂದರೂ ತಪ್ಪಾಗಲಾರದು. ಸಿಎಂ ಸಿದ್ದು ಈಗ ಮತ್ತೊಂದು ಮಹತ್ವದ ಹೆಜ್ಜೆಯಿಟ್ಟಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಹೈಕಮಾಂಡ್ ಅಣತಿ ಮೇರೆಗೆ ಸಿಎಂ ಸಿದ್ದರಾಮಯ್ಯ ಎರಡು ಬಾರಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದಾರೆ. ಮಾಧ್ಯಮಗಳ ಮುಂದೆ ಅಧಿವೇಶನಕ್ಕೆ ಸಂಬಂಧಪಟ್ಟಂತೆ ಎಂದರೂ ಅಧಿಕಾರ ಹಂಚಿಕೆ ಕುರಿತು ಎದ್ದಿದ್ದ ವಿವಾದ ತಣ್ಣಗಾಗಿಸಲು ಈ ಮೀಟಿಂಗ್ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ.

ಇದೀಗ ಎರಡು ಬ್ರೇಕ್ ಫಾಸ್ಟ್ ಮೀಟಿಂಗ್ ಗಳ ಬಳಿಕ ಇಬ್ಬರೂ ನಾಯಕರು ನಮ್ಮ ನಡುವೆ ಭಿನ್ನಾಭಿಪ್ರಾಯವಿಲ್ಲ ಎನ್ನುತ್ತಿದ್ದಾರೆ. ಆದರೆ ಒಳಗೊಳಗೇ ಕುರ್ಚಿ ಕದನದ ಕಸರತ್ತು ನಡೆಯುತ್ತಿದೆ ಎನ್ನಲಾಗಿದೆ. ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ ಈಗ ಸಚಿವರ ಜೊತೆ ಎರಡನೇ ಬಾರಿಗೆ ಸಭೆ ನಡೆಸಿದ್ದಾರೆ.

ನಿನ್ನೆ ಮತ್ತು ಇಂದು ಸಚಿವರ ಜೊತೆ ಸತತವಾಗಿ ಸಭೆ ನಡೆಸುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಯಥಾವತ್ತಾಗಿ ಮಾಧ್ಯಮಗಳ ಮುಂದೆ ಇದು ಸದನದಲ್ಲಿ ವಿಪಕ್ಷಗಳನ್ನು ಎದುರಿಸುವ ಬಗ್ಗೆ ಕಾರ್ಯತಂತ್ರ ರೂಪಿಸಲು ನಡೆಯುತ್ತಿರುವ ಸಭೆ ಎಂದಿದ್ದಾರೆ. ಆದರೆ ಇಲ್ಲೂ ಇದಕ್ಕೆ ಹೊರತಾಗಿ ಬೇರೆ ಕಾರ್ಯತಂತ್ರಗಳೂ ಇಲ್ಲಿ ನಡೆಯುತ್ತಿರಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments