Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ಶಾಂತಿ ಕಾಪಾಡುವಂತೆ ಸಿಎಂ ಸಿದ್ದರಾಮಯ್ಯ ಮನವಿ

ಕಾವೇರಿ ವಿವಾದ
ಬೆಂಗಳೂರು , ಬುಧವಾರ, 21 ಸೆಪ್ಟಂಬರ್ 2016 (11:21 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ಮತ್ತೆ ರಾಜ್ಯಕ್ಕೆ ಹಿನ್ನೆಡೆಯುಂಟಾಗಿದ್ದು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. 
 
ಕಾವೇರಿ ನದಿಯಿಂದ ತಮಿಳುನಾಡಿಗೆ ಸೆಪ್ಟೆಂಬರ್ 27ರ ವರೆಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕು ಎಂದು ನಿನ್ನೆ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. 
 
ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನೀರು ಬಿಡುಗಡೆ ಮಾಡುವ ಕುರಿತು ಇಲ್ಲಿಯವರೆಗೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಇಂದು ಸಂಜೆ ನಡೆಯುವ ಸರ್ವಪಕ್ಷ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ. ಸುಪ್ರೀಂ ಆದೇಶದಿಂದ ರಾಜ್ಯದ ಜನತೆ ಆಕ್ರೋಶಕ್ಕೆ ಒಳಗಾಗಬಾರದು ಎಂದು ಮುಖ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ವಿವಾದ: ಸರ್ವಪಕ್ಷ ಸಭೆಗೆ ಬಿಜೆಪಿ ಗೈರು?