Webdunia - Bharat's app for daily news and videos

Install App

ಆದ್ಯತೆ ಮೇರೆಗೆ ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

Krishnaveni K
ಗುರುವಾರ, 4 ಜುಲೈ 2024 (10:44 IST)
ಬೆಂಗಳೂರು: ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಕೃಷ್ಣಾದಲ್ಲಿ ವಸತಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
 
ಕೊಳಚೆ ನಿರ್ಮೂಲನೆ ಮಂಡಳಿ ಅಡಿಯಲ್ಲಿ 82 ಸಾವಿರ ಮನೆಗಳು, ರಾಜೀವ್‌ ಗಾಂಧಿ ವಸತಿ ನಿಗಮ ಅಡಿಯಲ್ಲಿ47800 ಮನೆಗಳು ಒಟ್ಟು 1.30 ಲಕ್ಷ ಮನೆಗಳು ನಿರ್ಮಾಣದ ವಿವಿಧ ಹಂತಗಳಲ್ಲಿದ್ದು, ಅವುಗಳ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ತಿಳಿಸಿದರು. 
 
ಪ್ರತಿ ಮನೆಯ ನಿರ್ಮಾಣದ ಘಟಕ ವೆಚ್ಚ 6 ರಿಂದ 7.5 ಲಕ್ಷಗಳಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನವನ್ನು ಹೊರತುಪಡಿಸಿ, ಬಾಕಿ ಸುಮಾರು 4 ರಿಂದ 5 ಲಕ್ಷ ರೂಪಾಯಿಗಳ ವಂತಿಕೆ ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗಿತ್ತು. ಈ ಮೊತ್ತವನ್ನು ಆರ್ಥಿಕವಾಗಿ ಆಶಕ್ತರಾಗಿರುವ ಕೊಳಗೇರಿ ನಿವಾಸಿಗಳು ಪಾವತಿಸಲು ಕಷ್ಟಕರವಾಗಿ ಮನೆಗಳ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದವು. ಆದುದರಿಂದ, ಫಲಾನುಭವಿಗಳ ಮೇಲಿನ ವಂತಿಕೆ ಹೊರೆಯನ್ನು ಕಡಿಮೆ ಮಾಡಿ, ಒಂದು ಲಕ್ಷಕ್ಕೆ ನಿಗಧಿಗೊಳಿಸಿ, ಪ್ರತಿ ಫಲಾನುಭವಿಗೆ ಬಾಕಿ ರೂ.4.00 ಲಕ್ಷಗಳಂತೆ ಸರ್ಕಾರದಿಂದಲೇ ಭರಿಸಲು ಅನುಮೋದನೆ ನೀಡಲಾಗಿದ್ದು, ಪ್ರಥಮ ಹಂತದಲ್ಲಿ ರೂ. ೫೦೦ಕೋಟಿ ಮಂಜೂರು ಮಾಡಲಾಗಿದೆ. ಹೆಚ್ಚುವರಿ ಅನುದಾನ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.
 
ಫಲಾನುಭವಿಗಳ ಪಾಲಿನ ಒಂದು ಲಕ್ಷ ರೂ. ವಂತಿಕೆ ಮೊತ್ತವನ್ನು ಸಂಗ್ರಹಿಸುವ ಮೂಲಕ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಸೂಚಿಸಿದರು.
 
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 592 ಕೊಳೆಗೇರಿಗಳ ಅಭಿವೃದ್ಧಿಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
 
ಕರ್ನಾಟಕ ಗೃಹ ಮಂಡಳಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಜಮೀನಿನಲ್ಲಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳಬಹುದು. ಆದರೆ 50:50  ಅನುಪಾತದ ಹಂಚಿಕೆ ಆಧಾರದಲ್ಲಿ ಜಮೀನು ಪಡೆದುಕೊಂಡರೆ, ರೈತರಿಗೆ ಮರುಹಂಚಿಕೆ ಮಾಡುವ ಭೂಮಿಯ ಪರಿವರ್ತನೆಯಲ್ಲಿ ವಿಳಂಬವಾಗುತ್ತಿದ್ದು,ಈ ಬಗ್ಗೆ ನೋಂದಣಿ ಮತ್ತು ಮುದ್ರಾಂಕ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಸೂಚಿಸಿದರು. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ರಾಜಮನೆತನದ ತ್ಯಾಗದ ಫಲವೇ ಕೆಆರ್‌ಎಸ್ ಡ್ಯಾಂ: ಮಹಾದೇವಪ್ಪ ಹೇಳಿಕೆಗೆ ಸುಬುಧೇಂದ್ರ ತೀರ್ಥ ಪ್ರತಿಕ್ರಿಯೆ

ಜಾರ್ಖಂಡ್‌ ಮಾಜಿ ಸಿಎಂ ಸಿಬು ಸೊರೇನ್ ನಿಧನ: ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಮಾಜಿ ಸಿಎಂ ಶಿಬು ಸೊರೆನ್ ನಿಧನ: ಮೂರು ದಿನಗಳ ಶೋಕಾಚರಣೆ ಘೋಷಿಸಿದ ಜಾರ್ಖಂಡ್‌ ಸರ್ಕಾರ

ಮುಂದಿನ ಸುದ್ದಿ
Show comments