Webdunia - Bharat's app for daily news and videos

Install App

ಸಂಧಿ ಎಂದರೇನು? ಸದನದಲ್ಲಿ ಸಂಧಿ ಪಾಠ ಹೇಳಿದ ಸಿಎಂ

Webdunia
ಶುಕ್ರವಾರ, 9 ಜೂನ್ 2017 (18:06 IST)
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಕೆಲ ಹೊತ್ತು ಸಂಧಿಗಳ ಬಗ್ಗೆ ಶಾಸಕರಿಗೆ ಪ್ರಶ್ನೆಗಳನ್ನು ಕೇಳುತ್ತಾ, ವಿವರಣೆ ನೀಡುತ್ತಾ, ಕೆಲ ಉದಾಹರಣೆಗಳನ್ನು ನೀಡಿ ಸದನದಲ್ಲಿ ಕನ್ನಡ ವ್ಯಾಕರಣದ ಬಗ್ಗೆ ವಿವರಿಸಿದ್ದು ವಿಶೇಷವಾಗಿತ್ತು. 
 
ಬಿಜೆಪಿ ಶಾಸಕ ನಾರಾಯಣ ಸ್ವಾಮಿ 10 ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಅಕ್ರಮವಾಗಿ ತೆರೆಯಲಾಗಿದೆ ಎಂದು ಪ್ರಶ್ನೆ ಕೇಳಿದಾಗ ಉತ್ತರಿಸಿದ ಸಿಎಂ ಸಿದ್ದರಾಮಯ್ಯ 56 ಲಕ್ಷ ಮಕ್ಕಳು ಕನ್ನಡ ಶಾಲೆಗಳಲ್ಲಿ ಓದುತ್ತಿಲ್ಲವಾ ? ನಿನಗೆ ಮಕ್ಕಳಿದ್ದಾರಾ? ಅವರು ಎಲ್ಲಿ ಓದುತ್ತಿದ್ದಾರೆ' ಎಂದು ಪ್ರಶ್ನಿಸಿದರು. ಅದು ಬಿಡಿ ಇಂದು ಹಲವರಿಗೆ ವ್ಯಾಕರಣ ಅಂದ್ರೆ ಏನು ಅಂಥ ಗೊತ್ತಿಲ್ಲ. ಸಂಧಿ ಎಂದರೇನು ಅಂಥಾ ಗೊತ್ತಿಲ್ಲ. ನಮ್ಮ ಭಾಷೆಯನ್ನೇ ಮರೆಯುವ ಕಾಲ ಬಂದಿದೆ ಎಂದು ಸಂಧಿ ಎಂದರೇನು ಸಮಾಸ ಎಂದರೇನು? ಎಂದು ಶಾಸಕರನ್ನು ಪ್ರಶ್ನಿಸಿ ಇಕ್ಕಟ್ಟಿಗೆ ಸಿಲುಕಿಸಿದರು. 
 
ನನ್ನ ಜೊತೆ 6 ನೇ ತರಗತಿಯಲ್ಲಿ ಪುಟ್ಟಸ್ವಾಮಿ  ಎಂಬ ಸಹಪಾಠಿ ಇದ್ದ. ಆಗೆಲ್ಲಾ ಮೌಖೀಕ ಪರೀಕ್ಷೆ ಇತ್ತು. ಮೇಷ್ಟು ಎಲ್ಲರಿಗೂ ಕರೆದು ಪ್ರಶ್ನೆ ಕೇಳಿದರು. ಸಂಧಿ ಎಂದರೇನು ಎಂದು ಮೇಷ್ಟ್ರು ಕೇಳಿದ್ದಕ್ಕೆ ಪುಟ್ಟಸ್ವಾಮಿ ಹೇಳಿದ ನಮ್ಮೆನೆಗೂ ನಮ್ಮ ದೊಡ್ಡಪ್ಪನ ಮನೆಗೂ ಓಣಿ ಇದೆಯಲ್ಲಾ ಅದೆ ಸರ್‌ ಸಂಧಿ ಅಂದ. ಎಂದು ಸದನವನ್ನು ನಗೆ ಗಡಲಲ್ಲಿ ತೇಲುವಂತೆ ಮಾಡಿದರು. 
 
ಸಂಧಿ ಅಂದರೆ ಎನ್ರೀ ಡಾಕ್ಟರೇ, ಎಂಬಿಬಿಎಸ್‌ ಮಾಡಿದ್ರಲ್ಲಾ ನಿಮಗೆ ಗೊತ್ತಿದೆಯಾ ಎಂದು ಬಿಜೆಪಿ ಶಾಸಕ ಅಶ್ವತ್ಥನಾರಾಯಣ ರನ್ನು ಕೇಳಿದರು. ಬಿ.ಆರ್‌ ಪಾಟೀಲ್ರೆ ನಿಮಗೆ ಗೊತ್ತಾ. ಯಾರಾದ್ರೂ ಹೇಳ್ರೀ.. ಎಂದು ಎಲ್ಲರಿಗೂ ಸವಾಲು ಹಾಕಿದರು. ಬಳಿಕ  ಅಕ್ಷರಗಳು ಎಡೆಬಿಡದೇ ಒಂದಕ್ಕೊಂದು ಸೇರುವುದೇ ಸಂಧಿ ಎಂದು ಹೇಳಿದರು. ಸಂಧಿಗಳಲ್ಲಿ 3 ವಿಧ  ಗುಣಸಂಧಿ, ಆಗಮ ಸಂಧಿ ,ಲೋಪ  ಸಂಧಿ ಎಂದು ಸಿಎಂ ವಿವರಿಸಿದರು.
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments