Webdunia - Bharat's app for daily news and videos

Install App

ಶಾಸಕರ ಅನಗತ್ಯ ಪತ್ರ ವ್ಯವಹಾರಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್?

Webdunia
ಬುಧವಾರ, 6 ಸೆಪ್ಟಂಬರ್ 2023 (14:15 IST)
ಬೆಂಗಳೂರು : ಮಾಜಿ ಸಚಿವ ಹಿರಿಯ ಶಾಸಕ ರಾಯರೆಡ್ಡಿ ಸಿಎಂಗೆ ಪತ್ರ ಬರೆದ ವಿಚಾರ ಸದ್ದು ಮಾಡಿದ್ದ ಬೆನ್ನಲ್ಲೇ ಪತ್ರ ವ್ಯವಹಾರಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಕೆಲಸ ಆಗಬೇಕಿರುವ ಇಲಾಖೆಯ ಸಚಿವರಿಗೆ ಪತ್ರ ಬರೆದು ಮನವಿ ಮಾಡಿ. ನಿಮ್ಮ ಪತ್ರಕ್ಕೆ ಸಚಿವರು ಸ್ಪಂದಿಸದಿದ್ದರೆ ಕೆಲಸ ಆಗದಿದ್ದರೆ ನನ್ನ ಬಳಿ ಬನ್ನಿ. ಆಗಲೂ ಬಗೆಹರಿಯದಿದ್ದರೆ ಪತ್ರ ಬರೆಯಿರಿ. ಎಲ್ಲದಕ್ಕೂ ನನಗೆ ಪತ್ರ ಬರೆದರೆ ಹೇಗೆ? ಎಂದು ಸ್ವ ಪಕ್ಷೀಯ ಶಾಸಕರಿಗೆ ಸಂದೇಶ ರವಾನೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಲ್ಲಾ ಸಚಿವರು ಶಾಸಕಾಂಗ ಪಕ್ಷದ ಸಭೆ ನಂತರ ಹಾಗೂ ಸಿಎಂ ಜೊತೆಗಿನ ಜಿಲ್ಲಾವಾರು ಸಭೆಯ ನಂತರ ಸರಿಯಾಗಿ ಸ್ಪಂದಿಸುತ್ತಿದ್ದಾರೆ. ಹಾಗಿದ್ದು ನನಗೆ ನೇರವಾಗಿ ಪತ್ರ ಬರೆಯುವ ಸಂಪ್ರದಾಯ ಒಳ್ಳೆಯದಲ್ಲ.
ಸಚಿವರನ್ನ ಮೊದಲು ಸಂಪರ್ಕಿಸಿ ಆಮೇಲೆ ಬನ್ನಿ ಎಂಬ ಸಂದೇಶವನ್ನು ಸ್ವಪಕ್ಷಿಯ ಶಾಸಕರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಅನಗತ್ಯ ವಿವಾದಗಳಿಗೆ ಈ ಮೂಲಕ ತೆರೆ ಎಳೆಯಲು ಅವರು ಮುಂದಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments