ಶಾಸಕರ ಅನಗತ್ಯ ಪತ್ರ ವ್ಯವಹಾರಕ್ಕೆ ಸಿಎಂ ಸಿದ್ದರಾಮಯ್ಯ ಬ್ರೇಕ್?

Webdunia
ಬುಧವಾರ, 6 ಸೆಪ್ಟಂಬರ್ 2023 (14:15 IST)
ಬೆಂಗಳೂರು : ಮಾಜಿ ಸಚಿವ ಹಿರಿಯ ಶಾಸಕ ರಾಯರೆಡ್ಡಿ ಸಿಎಂಗೆ ಪತ್ರ ಬರೆದ ವಿಚಾರ ಸದ್ದು ಮಾಡಿದ್ದ ಬೆನ್ನಲ್ಲೇ ಪತ್ರ ವ್ಯವಹಾರಕ್ಕೆ ಕಡಿವಾಣ ಹಾಕಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.

ಕೆಲಸ ಆಗಬೇಕಿರುವ ಇಲಾಖೆಯ ಸಚಿವರಿಗೆ ಪತ್ರ ಬರೆದು ಮನವಿ ಮಾಡಿ. ನಿಮ್ಮ ಪತ್ರಕ್ಕೆ ಸಚಿವರು ಸ್ಪಂದಿಸದಿದ್ದರೆ ಕೆಲಸ ಆಗದಿದ್ದರೆ ನನ್ನ ಬಳಿ ಬನ್ನಿ. ಆಗಲೂ ಬಗೆಹರಿಯದಿದ್ದರೆ ಪತ್ರ ಬರೆಯಿರಿ. ಎಲ್ಲದಕ್ಕೂ ನನಗೆ ಪತ್ರ ಬರೆದರೆ ಹೇಗೆ? ಎಂದು ಸ್ವ ಪಕ್ಷೀಯ ಶಾಸಕರಿಗೆ ಸಂದೇಶ ರವಾನೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಲ್ಲಾ ಸಚಿವರು ಶಾಸಕಾಂಗ ಪಕ್ಷದ ಸಭೆ ನಂತರ ಹಾಗೂ ಸಿಎಂ ಜೊತೆಗಿನ ಜಿಲ್ಲಾವಾರು ಸಭೆಯ ನಂತರ ಸರಿಯಾಗಿ ಸ್ಪಂದಿಸುತ್ತಿದ್ದಾರೆ. ಹಾಗಿದ್ದು ನನಗೆ ನೇರವಾಗಿ ಪತ್ರ ಬರೆಯುವ ಸಂಪ್ರದಾಯ ಒಳ್ಳೆಯದಲ್ಲ.
ಸಚಿವರನ್ನ ಮೊದಲು ಸಂಪರ್ಕಿಸಿ ಆಮೇಲೆ ಬನ್ನಿ ಎಂಬ ಸಂದೇಶವನ್ನು ಸ್ವಪಕ್ಷಿಯ ಶಾಸಕರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಅನಗತ್ಯ ವಿವಾದಗಳಿಗೆ ಈ ಮೂಲಕ ತೆರೆ ಎಳೆಯಲು ಅವರು ಮುಂದಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್: ರಾತ್ರೋ ರಾತ್ರಿ ಮಾಡಿದ್ದೇನು

Karnataka Weather: ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಮುಂದಿನ ಸುದ್ದಿ
Show comments