Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಬಜೆಟ್ ನಿರಾಶಾದಾಯಕ: ಕುಮಾರಸ್ವಾಮಿ

ಸಿಎಂ ಸಿದ್ದರಾಮಯ್ಯ ಬಜೆಟ್ ನಿರಾಶಾದಾಯಕ: ಕುಮಾರಸ್ವಾಮಿ
ಬೆಂಗಳೂರು , ಬುಧವಾರ, 15 ಮಾರ್ಚ್ 2017 (15:49 IST)
ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಿರಾಶಾದಾಯಕವಾಗಿದೆ. ರೈತರ ಸಾಲ ಮನ್ನಾ ನಿರೀಕ್ಷೆಯೂ ಹುಸಿಯಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ರಾಜ್ಯದ ಜನತೆಯ ನಿರೀಕ್ಷೆಯನ್ನು ಸಿಎಂ ಸಿದ್ದರಾಮಯ್ಯ ಹುಸಿಗೊಳಿಸಿದ್ದಾರೆ. ಸಾಲ ಮನ್ನಾ ಮಾಡಿ ಎಂದು ಹೇಳುವ ನೈತಿಕತೆ ಬಿಜೆಪಿಯವರಿಗಿಲ್ಲ ಎಂದು ಲೇವಡಿ ಮಾಡಿದ್ದಾರೆ.
 
ನಾನು ಸಿಎಂ ಆಗಿದ್ದಾಗ ರೈತರ ಸಾಲ ಮನ್ನಾ ಮಾಡುವ ಸಂದರ್ಭದಲ್ಲಿ ಬಿಜೆಪಿ ಅದನ್ನು ತೀವ್ರವಾಗಿ ವಿರೋಧಿಸಿತ್ತು. ಆದಾಗ್ಯೂ ನಾನು ರೈತರ ಸಾಲ ಮನ್ನಾ ಪರವಾಗಿದ್ದೆ ಎಂದು ತಿಳಿಸಿದ್ದಾರೆ.
 
ರಾಜ್ಯದ ರೈತರು ಭೀಕರ ಬರಗಾಲವನ್ನು ಎದುರಿಸುತ್ತಾ ಸಾಲದ ಬಾಧೆಯಿಂದ ತತ್ತರಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರ ರೈತರ ನೆರವಿಗೆ ಬರಬೇಕಾಗಿತ್ತು ಎಂದು ಮಾಜಿ ಸಿಎಂ ಜೆಡಿಎಸ್ ಕುಮಾರಸ್ವಾಮಿ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರೈತರ ಸಾಲ ಮನ್ನಾ ನಿರೀಕ್ಷೆ ಹುಸಿಯಾಗಿದೆ: ಶೆಟ್ಟರ್