Select Your Language

Notifications

webdunia
webdunia
webdunia
webdunia

ಸಚಿವ ರಾಮಲಿಂಗಾರೆಡ್ಡಿ, ರಮಾನಾಥ್ ರೈಗೆ ಸಿಎಂ ಬುಲಾವ್

ಸಚಿವ ರಾಮಲಿಂಗಾರೆಡ್ಡಿ, ರಮಾನಾಥ್ ರೈಗೆ ಸಿಎಂ ಬುಲಾವ್
ಬೆಂಗಳೂರು , ಗುರುವಾರ, 31 ಆಗಸ್ಟ್ 2017 (19:36 IST)
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮತ್ತು ಸಚಿವ ರಮಾನಾಥ್ ರೈಗೆ ಸಿಎಂ ಸಿದ್ದರಾಮಯ್ಯ ಆಹ್ವಾನಿಸಿದ್ದು ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗೃಹಖಾತೆ ಯಾರಿಗೆ ನೀಡಬೇಕು ಎನ್ನುವ ಬಗ್ಗೆ ಸಿಎಂ ಸಿದ್ದರಾಮಯ್ಯ ಗಂಬೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ,ಗೃಹ ಸಚಿವ ಖಾತೆಯ ರೇಸ್‌ನಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಅರಣ್ಯ ಖಾತೆ ಸಚಿವ ರಮಾನಾಥ್ ರೈ ಮತ್ತು ಎಂ.ಆರ್. ಸೀತಾರಾಂ ಮುಂಚೂಣಿಯಲ್ಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
 
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತೆರವಿನಿಂದ ಖಾಲಿಯಾದ ಗೃಹ ಖಾತೆಯನ್ನು ರೈಗೆ ನೀಡಿದಲ್ಲಿ ಬಿಜೆಪಿ ಹೋರಾಟ ನಡೆಸಬಹುದು ಎನ್ನುವ ಆತಂಕ ಕೂಡಾ ಸಿಎಂ ಸಿದ್ದರಾಮಯ್ಯನವರಿಗೆ ಕಾಡುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡರ ಅನಿಸಿಕೆಯಾಗಿದೆ.
 
ಸಿಎಂ ಸಿದ್ದರಾಮಯ್ಯರ ನಡೆ ತೀವ್ರ ಕುತೂಹಲ ಕೆರಳಿಸಿದ್ದು, ಕೊನೆಗೂ ಯಾರು ಗೃಹಖಾತೆಯನ್ನು ಅಲಂಕರಿಸುತ್ತಾರೆ ಎನ್ನುವ ಬಗ್ಗೆ ಉಹಾಪೋಹಗಳು ಹರಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 
 

Share this Story:

Follow Webdunia kannada

ಮುಂದಿನ ಸುದ್ದಿ

14 ವರ್ಷದ ಅಪ್ರಾಪ್ತಳ ಮೇಲೆ ಗ್ಯಾಂಗ್‌ರೇಪ್: ಆರೋಪಿಗೆ 20 ವರ್ಷ ಜೈಲು ಶಿಕ್ಷೆ