Select Your Language

Notifications

webdunia
webdunia
webdunia
webdunia

ಸರ್ಕಾರಕ್ಕೆ ಮುಜುಗರ ತಂದಿಟ್ಟ ಬೆನ್ನಲ್ಲೇ ಬಿಆರ್ ಪಾಟೀಲ್ ಗೆ ಸಿಎಂ ಬುಲಾವ್

BR Patil

Krishnaveni K

ಬೆಂಗಳೂರು , ಸೋಮವಾರ, 23 ಜೂನ್ 2025 (12:11 IST)
Photo Credit: Instagram
ಬೆಂಗಳೂರು: ಸರ್ಕಾರದ ವಿರುದ್ಧವೇ ಭ್ರಷ್ಟಾಚಾರದ ಆರೋಪ ಹೊರಿಸಿ ಮುಜುಗರ ತಂದಿಟ್ಟಿರುವ ಹಿರಿಯ ಶಾಸಕ ಬಿಆರ್ ಪಾಟೀಲ್ ಗೆ ಈಗ ಸಿಎಂ ಸಿದ್ದರಾಮಯ್ಯ ಬುಲಾವ್ ನೀಡಿದ್ದಾರೆ.

ವಸತಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಶಾಸಕ ಬಿಆರ್ ಪಾಟೀಲ್ ಅವರ ಅಡಿಯೋ ವೈರಲ್ ಆಗಿತ್ತು. ಇದೀಗ ವಿಪಕ್ಷ ಬಿಜೆಪಿಗೆ ಒಳ್ಳೆಯ ಅಸ್ತ್ರವಾಗಿ ಪರಿಣಮಿಸಿದೆ. ಇದನ್ನೇ ಮುಂದಿಟ್ಟುಕೊಂಡು ಸಚಿವ ಜಮೀರ್ ಅಹ್ಮದ್ ರಾಜೀನಾಮೆಗೂ ಒತ್ತಾಯಿಸುತ್ತಿದೆ.

ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣ ಬಳಿಕ ಈಗ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೊಂದು ಹಗರಣ ಆರೋಪ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅದೂ ಕಾಂಗ್ರೆಸ್ ಶಾಸಕರೇ ಆರೋಪ ಮಾಡಿರುವುದರಿಂದ ಪಕ್ಷ ಮತ್ತು ಸರ್ಕಾರ ಮುಜುಗರಕ್ಕೀಡಾಗಿದೆ.

ಈ ಹಿನ್ನಲೆಯಲ್ಲಿ ಬಿಆರ್ ಪಾಟೀಲ್ ಗೆ ಖುದ್ದಿ ಸಿಎಂ ಸಿದ್ದರಾಮಯ್ಯ ಕರೆ ಮಾಡಿ ಬೆಂಗಳೂರಿನಲ್ಲಿ ಭೇಟಿಯಾಗಲು ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಈ ಭೇಟಿ ಬಳಿಕ ಬಿಆರ್ ಪಾಟೀಲ್ ನಿಲುವು ಏನಿರುತ್ತದೆ ಎಂಬುದು ಈಗ ಕುತೂಹಲಕಾರಿಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ಗಮನಿಸಿ, ಇನ್ಮೇಲೆ ಹೊಸ ರೂಲ್ಸ್