ಸಿಎಂ ಸಿದ್ದರಾಮಯ್ಯಗೆ ಇಂದು ಗಂಡಾಂತರ ಗ್ಯಾರಂಟಿ

Krishnaveni K
ಶುಕ್ರವಾರ, 27 ಸೆಪ್ಟಂಬರ್ 2024 (09:59 IST)
ಬೆಂಗಳೂರು: ಮುಡಾ ಹಗರಣದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್ ತನಿಖೆಗೆ ಆದೇಶಿಸಿದ್ದು, ಇಂದೇ ಸಿಎಂಗೆ ಗಂಡಾಂತರ ಕಾದಿದೆ.

ಇಂದು ಸಿಎಂ ವಿರುದ್ಧ ಎಫ್ಐಆರ್ ದಾಖಲಾಗುವ ಸಾಧ್ಯತೆಯಿದೆ. ಸಿಎಂ ಪ್ರಕರಣವನ್ನು ಲೋಕಾಯುಕ್ತ ಪೊಲೀಸರು ಕೈಗೆತ್ತಿಕೊಂಡಿದ್ದಾರೆ. ಇಂದು ಎಫ್ಐಆರ್ ದಾಖಲಿಸಲು ಸಿದ್ಧತೆ ನಡೆಸಿದ್ದಾರೆ. ನಿನ್ನೆ ಸಂಜೆಯಷ್ಟೇ ಲೋಕಾಯುಕ್ತ ಎಸ್ ಪಿ ಉದೇಶ್ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ತನಿಖೆಗೆ ನೀಡಲಾಗಿದ್ದ  ಆದೇಶ ಪ್ರತಿ ಪಡೆದುಕೊಂಡಿದ್ದರು.

ಎಫ್ಐಆರ್ ನಲ್ಲಿ ಸಿಎಂ ಸಿದ್ದರಾಮಯ್ಯನವರೇ ಎ1 ಆರೋಪಿಯಾಗುವ ಸಾಧ್ಯತೆಯಿದೆ. ಇದರಿಂದ ಸಿದ್ದರಾಮಯ್ಯ ವಿರುದ್ಧ ಕೇಸ್ ಸ್ಟ್ರಾಂಗ್ ಆಗಲಿದೆ. ಇನ್ನೊಂದೆಡೆ ಎಸ್ ಪಿ ಎಫ್ಐಆರ್ ದಾಖಲಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಮುಡಾ ಹಗರಣ ದೂರುದಾರ ಸ್ನೇಹಮಯಿ ಕೃಷ್ಣ ಎಸ್ ಪಿ ವಿರುದ್ಧವೂ ದೂರು ನೀಡಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಎಫ್ಐಅರ್ ದಾಖಲಾದ ನಂತರ ಕೇಸ್ ಗೆ ಮತ್ತಷ್ಟು ಬಲ ಸಿಗಲಿದೆ. ಒಂದು ವೇಳೆ ಅಗತ್ಯ ಬಂದರೆ ಅವರ ಬಂಧನವಾದರೂ ಅಚ್ಚರಿಯಿಲ್ಲ. ಎಫ್ಐಆರ್ ನಲ್ಲಿ ಯಾರು ಎ1 ಆರೋಪಿಯಾಗುತ್ತಾರೆ ಎಂಬುದೂ ಈ ಹಂತದಲ್ಲಿ ಪ್ರಮುಖವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments