Webdunia - Bharat's app for daily news and videos

Install App

ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೇ ಕನ್ನಡಿಗರಿಗೆ ಮೀಸಲಾತಿ ಟ್ವೀಟ್ ನ್ನೇ ಡಿಲೀಟ್ ಮಾಡಿಬಿಟ್ಟ ಸಿದ್ದರಾಮಯ್ಯ

Krishnaveni K
ಬುಧವಾರ, 17 ಜುಲೈ 2024 (15:03 IST)
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಸಿ ಮತ್ತು ಡಿ ದರ್ಜೆಯ ನೌಕರಿಯಲ್ಲಿ ಶೇ.100 ರಷ್ಟು ಮೀಸಲಾತಿ ಬಗ್ಗೆ ಈ ಮೊದಲು ಮಾಡಿದ್ದ ಟ್ವೀಟ್ ನ್ನು ಸಿಎಂ ಸಿದ್ದರಾಮಯ್ಯ ಇದೀಗ ಡಿಲೀಟ್ ಮಾಡಿದ್ದಾರೆ.
 

ಸಿಎಂ ಇಂತಹದ್ದೊಂದು ವಿಧೇಯಕ ಪಾಸ್ ಆದ ಬಗ್ಗೆ ಟ್ವೀಟ್ ಮಾಡಿದ ಬೆನ್ನಲ್ಲೇ ಉದ್ಯಮಿ ಕಿರಣ್ ಮಜುಂದಾರ್ ಶಾ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಕೆಲವೊಂದು ಕೌಶಲ್ಯದ ಕೆಲಸಕ್ಕೆ ಈ ನಿಯಮ ಅನ್ವಯವಾದರೆ ತೊಂದರೆಯಾಗುತ್ತದೆ ಎಂದಿದ್ದರು. ಅಲ್ಲದೆ ಸೋಷಿಯಲ್ ಮೀಡಿಯಾದಲ್ಲೂ ಸಾಕಷ್ಟು ಪರ-ವಿರೋಧ ಚರ್ಚೆಗಳು ಶುರುವಾಗಿದ್ದವು.

ಇದರ ಬೆನ್ನಲ್ಲೇ ಸಿಎಂ ಈ ಟ್ವೀಟ್ ನ್ನು ಡಿಲೀಟ್ ಮಾಡಿದ್ದಾರೆ. ವಿಧೇಯಕದಲ್ಲಿ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಶೇ.50 ರಷ್ಟು ಮತ್ತು ಮ್ಯಾನೇಜ್ ಮೆಂಟ್ ಅಲ್ಲದ ಹುದ್ದೆಗಳಿಗೆ ಶೇ.50 ರಷ್ಟು ಕನ್ನಡಿಗರಿಗೆ ಮೀಸಲಾತಿ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಆದರೆ ಸಿ ಮತ್ತು ಡಿ ದರ್ಜೆ ನೌಕರಿಯಲ್ಲಿ ಶೇ.100 ರಷ್ಟು ಕನ್ನಡಿಗರಿಗೆ ಮೀಸಲಾತಿ ಎನ್ನುವ ಬಗ್ಗೆ ಗೊಂದಲಗಳಿವೆ ಎನ್ನಲಾಗಿದೆ.

ಇದೇ ಕಾರಣಕ್ಕೆ ಸಿಎಂ ಟ್ವೀಟ್ ಡಿಲೀಟ್ ಮಾಡಿರಬಹುದು ಎನ್ನಲಾಗುತ್ತದೆ. ಆದರೆ ಟ್ವೀಟ್ ಡಿಲೀಟ್ ಮಾಡಿರುವುದಕ್ಕೆ ಸಿಎಂ ಸ್ಪಷ್ಟ ಕಾರಣವನ್ನೇನೂ ಕೊಟ್ಟಿಲ್ಲ. ಕನ್ನಡ ಪರ, ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments