ಈಗ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆಯೇ ಒಡಕು: ನನ್ನನ್ನೂ ಕರೀಬಹುದಿತ್ತು ಎಂದವರು ಯಾರು ನೋಡಿ

Krishnaveni K
ಮಂಗಳವಾರ, 2 ಡಿಸೆಂಬರ್ 2025 (10:16 IST)
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಈಗ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆಯೇ ಒಡಕು ಮೂಡಿದೆ. ನನ್ನನ್ನೂ ಕರಿಬಹುದಿತ್ತು ಎಂದು ಈಗ ಪ್ರಮುಖ ಸಚಿವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಕುಸ್ತಿ ಕದನವೆಲ್ಲಾ ತಿಳಿಯಾಗಿದೆ ಎಂದು ಸಾರಲು ಇಂದು ಡಿಕೆ ಶಿವಕುಮಾರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ  ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಿದ್ದಾರೆ. ಮೊನ್ನೆ ಸಿದ್ದು ನಿವಾಸದಲ್ಲಿ ಡಿಕೆಶಿ ಬ್ರೇಕ್ ಫಾಸ್ಟ್ ಮಾಡಿದ್ದರು. ಆದರೆ ಈಗ ಬ್ರೇಕ್ ಫಾಸ್ಟ್ ಮೀಟಿಂಗ್ ಬಗ್ಗೆಯೇ ಗೃಹಸಚಿವ ಜಿ ಪರಮೇಶ್ವರ್ ತಮ್ಮ ಆಕ್ಷೇಪ ಹೊರಹಾಕಿದ್ದಾರೆ.

‘ರಾಜ್ಯದಲ್ಲಿ ಈಗ ಎಲ್ಲಾ ಗೊಂದಲಗಳೂ ತಿಳಿಯಾಗಿದೆ ಎಂಬುದು ಖುಷಿಯ ವಿಚಾರ. ಸಿಎಂ ಮತ್ತು ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಿದ್ದಾರೆ. ನನ್ನನ್ನೂ ಕರೆದಿದ್ದರೆ ನಾನೂ ಹೋಗುತ್ತಿದ್ದೆ. ಆದರೆ ನನ್ನನ್ನು ಕರೆದಿಲ್ಲ’ ಎಂದು ಅಪಸ್ವರವೆತ್ತಿದ್ದಾರೆ.

ಇನ್ನು ತಾವೂ ಸಿಎಂ ಆಗಬೇಕೆಂಬುದು ಅಭಿಮಾನಿಗಳ ಬಯಕೆ ಸಹಜ ಎಂದಿದ್ದಾರೆ. ‘ಎಲ್ಲಾ ನಾಯಕರಿಗೂ ಸಿಎಂ ಆಗಬೇಕು ಎಂಬ ಆಸೆಯಿರುತ್ತದೆ. ನಮ್ಮ ನಾಯಕ ಸಿಎಂ ಆಗಲಿ ಎಂದು ಎಲ್ಲಾ ನಾಯಕರ ಅಭಿಮಾನಿಗಳೂ ಬಯಸುತ್ತಾರೆ. ಅದೇ ರೀತಿ ನನ್ನ ಅಭಿಮಾನಿಗಳೂ ಬಯಸುತ್ತಿದ್ದಾರೆ. ಇದರಲ್ಲಿ ತಪ್ಪೇನೂ ಇಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿಕ್ಕಪೇಟೆ ಮಾಜಿ ಸಚಿವ ಆರ್ ವಿ ದೇವರಾಜ್ ಹೃದಯಸ್ತಂಬನದಿಂದ ಸಾವು

Karnataka Weather: ಸತತ ಮಳೆ, ಮೋಡದ ನಂತರ ಇಂದಿನ ಹವಾಮಾನ ಬದಲಾವಣೆ ಗಮನಿಸಿ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ಮುಂದಿನ ಸುದ್ದಿ
Show comments