Webdunia - Bharat's app for daily news and videos

Install App

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುಚಿಕು ಕ್ಷಣ: ಜಿಲ್ಲಾಧಿಕಾರಿಗಳ ಸಭೆಯಲ್ಲಿ ಇಬ್ಬರೂ ಕಂಡಿದ್ದು ಹೀಗೆ

Krishnaveni K
ಸೋಮವಾರ, 8 ಜುಲೈ 2024 (12:19 IST)
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣದ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಇಂದು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಿಎಂ ಮತ್ತು ಡಿಸಿಎಂ ಪರಸ್ಪರ ಆತ್ಮೀಯರಾಗಿ ಕಂಡುಬಂದರು.

ರಾಜ್ಯದಲ್ಲಿ ಡೆಂಗ್ಯೂ, ಜೀಕಾ ವೈರಸ್, ಮಲೇರಿಯಾ ಸೇರಿದಂತೆ ಜ್ವರ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇಂದು ಸಿಎಂ ಮತ್ತು ಡಿಸಿಎಂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.

ಈ ವೇಳೆ ಇಬ್ಬರೂ ನಾಯಕರು ಪರಸ್ಪರ ಆತ್ಮೀಯವಾಗಿ ಕಾಲ ಕಳೆದಿದ್ದಾರೆ. ಸಿಎಂ ಕುರ್ಚಿಗಾಗಿ ಇಬ್ಬರ ನಡುವೆ ಫೈಟ್ ನಡೆಯುತ್ತಿದೆ ಎಂಬ ವರದಿಗಳ ಬೆನ್ನಲ್ಲೇ ಇಬ್ಬರೂ ಈ ರೀತಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಈ ಮೂಲಕ ತಾವಿಬ್ಬರೂ ಒಂದಾಗಿದ್ದೇವೆ ಎಂದು ಸಂದೇಶ ಸಾರಿದಂತಾಗಿದೆ.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments