50 ವೇಗದೂತ ಮಾದರಿಯ ಬಸ್‌ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Sampriya
ಬುಧವಾರ, 18 ಸೆಪ್ಟಂಬರ್ 2024 (20:13 IST)
Photo Courtesy X
ಬೆಂಗಳೂರು: ಇಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ-ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಹಾಗೂ ಇತರೇ ಸಚಿವರು ನೆರವೇರಿಸಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಈ ಭಾಗದ ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿಯಲ್ಲಿ ಖರೀದಿಸಲಾದ ಒಟ್ಟು 109 ವೇಗದೂತ ಮಾದರಿಯ ಬಸ್ಸುಗಳ ಪೈಕಿ ಇಂದು 50 ಬಸ್‌ಗಳನ್ನು ಉದ್ಘಾಟನೆ ಮಾಡಲಾಗಿದೆ‌.

ಈ ಬಸ್‌ಗಳಲ್ಲಿ 200 HP ಸಾಮರ್ಥ್ಯದ BS-6 ಎಂಜಿನ್‌ಗಳನ್ನು ಅಳವಡಿಸಿದ್ದು, 50 ಪ್ರಯಾಣಿಕ ಆಸನಗಳನ್ನು ಹೊಂದಿವೆ.

ಈ ಬಸ್‌ಗಳನ್ನು ಆಟೋಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ ಬಸ್ ಕೋಡ್‌ನಂತೆ ನಿರ್ಮಿಸಲಾಗಿದ್ದು, ಪ್ರಯಾಣಿಕರ ಸುರಕ್ಷತೆಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ, ಈ ಬಸ್ಸುಗಳಲ್ಲಿ, Fire Detection and Alarm System, Electronic Vehicle Stability Control System, ಸ್ವಯಂ ಚಾಲಿತ ಬಾಗಿಲು , ನಾಲ್ಕು ಸಿ.ಸಿ. ಕ್ಯಾಮೆರಾಗಳು, ರೀವರ್ಸ್ ಪಾರ್ಕಿಂಗ್ ಅಲರಾಮ್ ಸಿಸ್ಟಂ, ವೆಹಿಕಲ್ ಲೋಕೆಶನ್ ಟ್ರ್ಯಾಕಿಂಗ್ ಸಿಸ್ಟಂ ಹಾಗೂ ಪ್ಯಾಸೆಂಜರ್ ಇನಫಾರಮೆಶನ್ ಸಿಸ್ಟಂ & ಪ್ಯಾನಿಕ್ ಬಟನ್‌ಗಳನ್ನು ಅಳವಡಿಸಲಾಗಿದೆ.

ಶ್ರೀ ಎಚ್.ಕೆ ಪಾಟೀಲ್, ಶ್ರೀ ಪರಮೇಶ್ವರ್, ಶ್ರೀ ಕೆ.ಜೆ ಜಾರ್ಜ್, ಶ್ರೀ ಕೆ.ಎಚ್ ಮುನಿಯಪ್ಪ, ಶ್ರೀ ಅಜಯ್ ಧರ್ಮಸಿಂಗ್ ಹಾಗೂ ಇತರರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments