Webdunia - Bharat's app for daily news and videos

Install App

50 ವೇಗದೂತ ಮಾದರಿಯ ಬಸ್‌ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Sampriya
ಬುಧವಾರ, 18 ಸೆಪ್ಟಂಬರ್ 2024 (20:13 IST)
Photo Courtesy X
ಬೆಂಗಳೂರು: ಇಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೇಗದೂತ ಮಾದರಿ ಬಸ್‌ಗಳ ಲೋಕಾರ್ಪಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ-ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಹಾಗೂ ಇತರೇ ಸಚಿವರು ನೆರವೇರಿಸಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಈ ಭಾಗದ ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನದಡಿಯಲ್ಲಿ ಖರೀದಿಸಲಾದ ಒಟ್ಟು 109 ವೇಗದೂತ ಮಾದರಿಯ ಬಸ್ಸುಗಳ ಪೈಕಿ ಇಂದು 50 ಬಸ್‌ಗಳನ್ನು ಉದ್ಘಾಟನೆ ಮಾಡಲಾಗಿದೆ‌.

ಈ ಬಸ್‌ಗಳಲ್ಲಿ 200 HP ಸಾಮರ್ಥ್ಯದ BS-6 ಎಂಜಿನ್‌ಗಳನ್ನು ಅಳವಡಿಸಿದ್ದು, 50 ಪ್ರಯಾಣಿಕ ಆಸನಗಳನ್ನು ಹೊಂದಿವೆ.

ಈ ಬಸ್‌ಗಳನ್ನು ಆಟೋಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್ ಬಸ್ ಕೋಡ್‌ನಂತೆ ನಿರ್ಮಿಸಲಾಗಿದ್ದು, ಪ್ರಯಾಣಿಕರ ಸುರಕ್ಷತೆಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ, ಈ ಬಸ್ಸುಗಳಲ್ಲಿ, Fire Detection and Alarm System, Electronic Vehicle Stability Control System, ಸ್ವಯಂ ಚಾಲಿತ ಬಾಗಿಲು , ನಾಲ್ಕು ಸಿ.ಸಿ. ಕ್ಯಾಮೆರಾಗಳು, ರೀವರ್ಸ್ ಪಾರ್ಕಿಂಗ್ ಅಲರಾಮ್ ಸಿಸ್ಟಂ, ವೆಹಿಕಲ್ ಲೋಕೆಶನ್ ಟ್ರ್ಯಾಕಿಂಗ್ ಸಿಸ್ಟಂ ಹಾಗೂ ಪ್ಯಾಸೆಂಜರ್ ಇನಫಾರಮೆಶನ್ ಸಿಸ್ಟಂ & ಪ್ಯಾನಿಕ್ ಬಟನ್‌ಗಳನ್ನು ಅಳವಡಿಸಲಾಗಿದೆ.

ಶ್ರೀ ಎಚ್.ಕೆ ಪಾಟೀಲ್, ಶ್ರೀ ಪರಮೇಶ್ವರ್, ಶ್ರೀ ಕೆ.ಜೆ ಜಾರ್ಜ್, ಶ್ರೀ ಕೆ.ಎಚ್ ಮುನಿಯಪ್ಪ, ಶ್ರೀ ಅಜಯ್ ಧರ್ಮಸಿಂಗ್ ಹಾಗೂ ಇತರರು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments