Webdunia - Bharat's app for daily news and videos

Install App

ಮೈಲಾರಿ ಹೋಟೆಲ್ ನಲ್ಲಿ ಸಾಮಾನ್ಯರಂತೆ ತಿಂಡಿ ಸವಿದ ಸಿದ್ದರಾಮಯ್ಯ

Krishnaveni K
ಸೋಮವಾರ, 29 ಜುಲೈ 2024 (14:19 IST)
ಮೈಸೂರು: ಇಂದು ಕೆಆರ್ ಎಸ್ ಗೆ ಬಾಗಿನ ಅರ್ಪಿಸಲು ಮೈಸೂರಿಗೆ ಬಂದ ಸಿಎಂ ಸಿದ್ದರಾಮಯ್ಯ ತಮ್ಮ ಮೆಚ್ಚಿನ ಮೈಲಾರಿ ಹೋಟೆಲ್ ನಲ್ಲಿ ತಿಂಡಿ ಸವಿದಿದ್ದಾರೆ.

ಭಾರೀ ಮಳೆಯಿಂದಾಗಿ ಕೆಆರ್ ಎಸ್ ಡ್ಯಾಮ್ ಭರ್ತಿಯಾದ ಹಿನ್ನಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಸಂಪ್ರದಾಯದಂತೆ ಬಾಗಿನ ಅರ್ಪಿಸಲು ಬಂದಿದ್ದರು. ತಮ್ಮ ಸಂಗಡಿಗರೊಂದಿಗೆ ಕೆಆರ್ ಎಸ್ ಗೆ ತೆರಳುವ ದಾರಿಯಲ್ಲಿ ಸಿಎಂ ಸಿದ್ದರಾಮಯ್ಯ ಮೈಲಾರಿ ಹೋಟೆಲ್ ಇಡ್ಲಿ ಸವಿದರು.

ಸಾಮಾನ್ಯರಂತೇ ಬೆಂಚ್ ನಲ್ಲಿ ಕುಳಿತು ಬಾಳೆ ಎಲೆಯಲ್ಲಿ ತಿಂಡಿ ಸವಿದ ಸಿದ್ದರಾಮಯ್ಯ ಬಳಿಕ ಕೆಆರ್ ಎಸ್ ಗೆ ತೆರಳಿದರು. ಇದಕ್ಕೆ ಮೊದಲು ಕಾವೇರಿ ತಾಯಿಗೆ ಪೂಜೆ ಸಲ್ಲಿಸಿದ್ದ ಸಿದ್ದರಾಮಯ್ಯ ಬಳಿಕ ಬಾಗಿನ ಅರ್ಪಿಸಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಸಾಥ್ ನೀಡಿದ್ದರು.

ಇದು ಮೂರನೇ ಬಾರಿಗೆ ಸಿಎಂ ಕಾವೇರಿಗೆ ಬಾಗಿನ ಅರ್ಪಿಸಿದ್ದಾರೆ. ಈ ವೇಳೆ ಸಚಿವರಾದ ಚೆಲುವರಾಯಸ್ವಾಮಿ, ಎಚ್ ಸಿ ಮಹದೇವಪ್ಪ ಮೊದಲಾದವರು ಸಿಎಂ ಜೊತೆಗಿದ್ದರು. ಮೊದಲೇ ಸಿದ್ಧ ಮಾಡಿಟ್ಟಿದ್ದ ಬಾಗಿನಗಳಿಗೆ ಹೂ ಹಾಕಿ ಕೈ ಮುಗಿದು ಬಳಿಕ ಕಾವೇರಿ ತಾಯಿಗೆ ಅರ್ಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments