Daily Horoscope

ಮುಡಾ ಪ್ರಕರಣದ ಬಗ್ಗೆ ಕೇಳುವಾಗ ದೂರದಿಂದಲೇ ಟಾ ಟಾ ಬೈ ಬೈ ಎಂದು ತೆರಳಿದ ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 4 ಜುಲೈ 2024 (14:26 IST)
ಬೆಂಗಳೂರು: ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂದು ವಿಪಕ್ಷ ಬಿಜೆಪಿ ಆಗ್ರಹಿಸುತ್ತಿದ್ದರೆ ಇತ್ತ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳ ಪ್ರಶ್ನೆಗೆ ಸರಿಯಾಗಿ ಉತ್ತರಿಸದೇ ನುಣುಚಿಕೊಂಡಿದ್ದಾರೆ.

ಮುಡಾ ಸೈಟು ಹಂಚಿಕೆ ವಿಚಾರದಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಸಿಎಂ ಪತ್ನಿ ಪಾರ್ವತಿ ಹೆಸರೂ ಕೇಳಿಬಂದಿದೆ. ಈ ಬಗ್ಗೆ ವಿಪಕ್ಷ ಬಿಜೆಪಿ ಸಿಬಿಐ ತನಿಖೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ಮಾಡುತ್ತಲೇ ಇದೆ. ಆದರೆ ನಿನ್ನೆ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದಿದ್ದರು.

ಇಂದೂ ಕೂಡಾ ಸಿಎಂ ಬಳಿ ಮಾಧ್ಯಮಗಳು ಪ್ರಕರಣವನ್ನು ಸಿಬಿಐಗೆ ವಹಿಸುತ್ತೀರಾ ಎಂದು ಪ್ರಶ್ನಿಸಿವೆ. ಇನ್ನು, ಮುಡಾ ಬಗ್ಗೆ ಮಾಧ್ಯಮಗಳು ಪ್ರಶ್ನಿಸುತ್ತಲೇ ಮೈಕ್ ಬಳಿಯೂ ಬರದೇ ದೂರದಿಂದಲೇ ಮಾತನಾಡುತ್ತಾ ಸಿಎಂ ನಿರ್ಗಮಿಸಿದ್ದಾರೆ.  ಮತ್ತೊಮ್ಮೆ ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದಿದ್ದಾರೆ.

‘ನಾವು ಇದುವರೆಗೆ ಏಳು ಪ್ರಕರಣವನ್ನು ಸಿಬಿಐಗೆ ವಹಿಸಿದ್ದೇವೆ. ಆದರೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಾವು ಹಲವು ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಿ ಎಂದು ಕೇಳಿದ್ದರೂ ಕೊಟ್ಟಿರಲಿಲ್ಲ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸುವ ಅವಶ್ಯಕತೆಯಿಲ್ಲ’ ಎಂದು ದೂರದಿಂದಲೇ ಹೇಳಿ ತೆರಳಿದ್ದಾರೆ. ಈ ಮೂಲಕ ಅವರು ಕೊಟ್ಟಿಲ್ಲ ಹಾಗಾಗಿ ನಾವೂ ಕೊಡಲ್ಲ ಎನ್ನುವ ಧೋರಣೆ ಪ್ರದರ್ಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments