Webdunia - Bharat's app for daily news and videos

Install App

ದೆಹಲಿಗೆ ಹೋದರೂ ಸಿಎಂ ಸಿದ್ದರಾಮಯ್ಯಗೆ ಮುಡಾ ಟೆನ್ಷನ್

Krishnaveni K
ಗುರುವಾರ, 21 ನವೆಂಬರ್ 2024 (12:23 IST)
ನವದೆಹಲಿ: ದೆಹಲಿಗೆ ಹೋದರೂ ಸಿಎಂ ಸಿದ್ದರಾಮಯ್ಯಗೆ ಮುಡಾ ಟೆನ್ಷನ್ ಕಡಿಮೆಯಾಗಿಲ್ಲ. ವಿತ್ತ ಸಚಿವೆಯನ್ನು ಭೇಟಿಯಾಗುವ ಉದ್ದೇಶದಿಂದ ದೆಹಲಿಗೆ ತೆರಳಿರುವ ಸಿಎಂ ಮೊದಲು ಮುಡಾ ವಿಚಾರವಾಗಿ ವಕೀಲರ ಜೊತೆ ಚರ್ಚೆ ನಡೆಸಿದ್ದಾರೆ.

ಇತ್ತೀಚೆಗಷ್ಟೇ ನಬಾರ್ಡ್ ಸಾಲ ಕಡಿತ ಮಾಡಿ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಆರೋಪಿಸಿದ್ದ ಸಿದ್ದರಾಮಯ್ಯ ದೆಹಲಿಗೆ ತೆರಳಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ನಮ್ಮ ಪರಿಸ್ಥಿತಿ ವಿವರಿಸುವುದಾಗಿ ಹೇಳಿದ್ದರು. ಅದರಂತೆ ಇಂದು ಅವರು ದೆಹಲಿಗೆ ತೆರಳಿದ್ದಾರೆ.

ಆದರೆ ದೆಹಲಿಗೆ ತೆರಳಿದ ತಕ್ಷಣ ಸಿಎಂ ಮೊದಲು ತಮ್ಮ ವಕೀಲ ಅಭಿಷೇಕ್ ಮನು ಸಿಂಘ್ವಿಯವರನ್ನು ಭೇಟಿ ಮಾಡಿದ್ದಾರೆ. ಮುಡಾ ಹಗರಣದಲ್ಲಿ ಅಭಿಷೇಕ್ ಮನು ಸಿಂಘ್ವಿಯವರು ಸಿದ್ದರಾಮಯ್ಯ ಪರವಾಗಿ ವಾದ ಮಂಡನೆ ಮಾಡುತ್ತಿದ್ದಾರೆ. ಹೀಗಾಗಿ ಈಗ ಸಿದ್ದರಾಮಯ್ಯ ತಮ್ಮ ಕೇಸ್ ಬಗ್ಗೆ ಚರ್ಚೆ ನಡೆಸಿದ್ದಾರೆ.

ಈಗಾಗಲೇ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯನವರನ್ನು ಒಂದು ಸುತ್ತಿನ ವಿಚಾರಣೆ ನಡೆಸಿದ್ದಾರೆ. ಹೀಗಾಗಿ ಮುಂದಿನ ಕಾನೂನು ಹೋರಾಟಗಳ ಬಗ್ಗೆ ಸಿಎಂ ತಮ್ಮ ವಕೀಲರ ಜೊತೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ  ವೇಳೆ ಅವರು ಮಾಧ್ಯಮಗಳಿಗೆ ಯಾವುದೇ ಮಾತನಾಡಲು ನಿರಾಕರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments