Webdunia - Bharat's app for daily news and videos

Install App

ನಾನು ಬಡವರ ಪರ ಇರುವುದಕ್ಕೇ ಮುಡಾ ಕೇಸ್ ಹಾಕಿದ್ದಾರೆ: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

Krishnaveni K
ಮಂಗಳವಾರ, 24 ಸೆಪ್ಟಂಬರ್ 2024 (14:22 IST)
ಬೆಂಗಳೂರು: ತಮ್ಮ ವಿರುದ್ಧ ರಾಜ್ಯಪಾಲರು ಮುಡಾ ಹಗರಣ ಪ್ರಾಸಿಕ್ಯೂಷನ್ ಗೆ ಸಮ್ಮತಿಸಿರುವುದು ಸರಿ ಎಂದು ಹೈಕೋರ್ಟ್ ಆದೇಶಿಸರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

‘ಹೈಕೋರ್ಟ್ ಆದೇಶದ ಅಂಶಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ ಸಂಪೂರ್ಣವಾಗಿ ತಿರಸ್ಕರಿಸಿದೆ. ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17 ಎ ಗೆ ಮಾತ್ರ ನ್ಯಾಯಮೂರ್ತಿಗಳು ಸೀಮಿತಗೊಳಿಸಿದ್ದಾರೆ’ ಎಂದಿದ್ದಾರೆ.

‘ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ.  ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ತಜ್ಞರ ಜೊತೆ ಸಮಾಲೋಚಿಸುತ್ತೇನೆ. ಕಾನೂನು ತಜ್ಞರ ಜೊತೆ ಚರ್ಚಿಸಿ ಹೋರಾಟದ ರೂಪುರೇಷೆ ನಿರ್ಧರಿಸುತ್ತೇನೆ. ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು. ಆದರೆ, ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ‌ ನಿರಾಕರಿಸಿದ್ದರು.

ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ. ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17 ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ.  ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದಿದ್ದಾರೆ.

ಇದು ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ದದ ಹೋರಾಟ ಎಂದು ವಾಗ್ದಾಳಿ ನಡೆಸಿದ ಸಿಎಂ ‘ ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ದ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ’ ಎಂದರು.

‘ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ ೪೦ ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ.

ಮುಡಾ ಪ್ರಕರಣ ಒಂದು ನೆಪ ಅಷ್ಟೇ. ಬಡವರು ಮತ್ತು ಶೋಷಿತರ ಪರವಾಗಿರುವ ನಮ್ಮ ಸರ್ಕಾರದ ಯೋಜನೆಗಳನ್ನು ನಿಲ್ಲಿಸಬೇಕೆಂಬುದೇ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖ್ಯ ಉದ್ದೇಶ. ಮುಡಾ ಪ್ರಕರಣವನ್ನು ಸೃಷ್ಟಿಸಿ, ಅದರ ಮೂಲಕ ಸುಳ್ಳು ಆರೋಪಗಳನ್ನು ಮಾಡುತ್ತಿರುವವರ ಮುಖಗಳನ್ನು ಒಮ್ಮೆ ರಾಜ್ಯದ ಜನತೆ ಸರಿಯಾಗಿ ನೋಡಬೇಕೆಂದು ನಾನು ಮನವಿ ಮಾಡುತ್ತೇನೆ’ ಎಂದರು.

‘ನನ್ನ ರಾಜೀನಾಮೆ ಕೇಳುತ್ತಿರುವ ಇದೇ ನಾಯಕರು ನಾನು ರಾಜ್ಯದ ಬಡವರು, ಶೋಷಿತರ ಪರವಾಗಿ ಜಾರಿಗೆ ತಂದಿದ್ದ ಯೋಜನೆಗಳನ್ನು ವಿರೋಧಿಸಿದವರೇ ಆಗಿದ್ದಾರೆ. ಇದೇ ಬಿಜೆಪಿ, ಜೆಡಿಎಸ್  ನಾಯಕರು ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತಂದಿದ್ದ ಅನ್ನಭಾಗ್ಯ, ಕ್ಷೀರ ಭಾಗ್ಯ, ಕ್ಷೀರ ಧಾರೆ, ವಿದ್ಯಾಸಿರಿ, ಕೃಷಿಭಾಗ್ಯ, ಪಶುಭಾಗ್ಯ, ಇಂದಿರಾ ಕ್ಯಾಂಟೀನ್ ಯೋಜನೆಗಳನ್ನು ವಿರೋಧಿಸಿದ್ದಾರೆ. ಇಂದು ನನ್ನ ವಿರುದ್ದ ರಾಜಕೀಯ ಸಂಚು ನಡೆಸುತ್ತಿರುವ ಇದೇ ನಾಯಕರು ಎಸ್ ಸಿ ಎಸ್ ಪಿ/ಟಿಎಸ್‌ ಪಿ ಕಾಯ್ದೆಯನ್ನು ವಿರೋಧಿಸಿದ್ದಾರೆ. ಕರ್ನಾಟಕದ ಜನತೆ ಇಲ್ಲಿಯ ವರೆಗೆ ಭಾರತೀಯ ಜನತಾ ಪಕ್ಷಕ್ಕೆ ಸ್ವಂತ ಬಲದಿಂದ ಅಧಿಕಾರಕ್ಕೆ ಬರುವಷ್ಟು ಬಹುಮತ ನೀಡಿಲ್ಲ. ಇಲ್ಲಿಯ ವರೆಗೆ ಬಿಜೆಪಿ ಅನೈತಿಕವಾಗಿ, ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದದ್ದು’ ಎಂದು ದೂರಿದ್ದಾರೆ.

‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಜನತೆ ಆಪರೇಷನ್ ಕಮಲಕ್ಕೆ ಅವಕಾಶವೇ ಇಲ್ಲದಂತೆ ನಮ್ಮ ಪಕ್ಷಕ್ಕೆ ೧೩೬ ಸದಸ್ಯರ ಬಲ ನೀಡಿ ಗೆಲ್ಲಿಸಿದರು. ಇದರಿಂದ ಹತಾಶೆಗೀಡಾಗಿರುವ ಬಿಜೆಪಿ, ಜೆಡಿಎಸ್ ನಾಯಕರು, ರಾಜಭವನವನ್ನು ದುರ್ಬಳಕೆ ಮಾಡಿಕೊಂಡು  ನನ್ನ ವಿರುದ್ದ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ನಮ್ಮ ಸರ್ಕಾರವನ್ನು ಡಿಸ್ಟರ್ಬ್ ಮಾಡುವ ಹುನ್ನಾರ ನಡೆಸಿದೆ.

ರಾಜಭವನದ ದುರ್ಬಳಕೆ ಮೂಲಕ ವಿರೋಧ ಪಕ್ಷಗಳ ಸರ್ಕಾರವನ್ನು ಹಣಿಯುವ ಸಂಚನ್ನು ನರೇಂದ್ರಮೋದಿ ನೇತೃತ್ವದ ಬಿಜೆಪಿ ದೇಶಾದ್ಯಂತ ನಡೆಸುತ್ತಿದೆ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

Karnataka Weather: ಎರಡು ದಿನಗಳಿಗೆ ಮಳೆ ಜೋರು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ಮುಂದಿನ ಸುದ್ದಿ