ಭರ್ಜರಿ ಬ್ಯಾಟ್ ಬೀಸಿ ಕ್ರಿಕೆಟ್ ಮೈದಾನಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

Krishnaveni K
ಸೋಮವಾರ, 2 ಡಿಸೆಂಬರ್ 2024 (13:10 IST)
ತುಮಕೂರು: ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 
 
ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು. 
 
ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ  ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದರು. 
 
ಆದಷ್ಟು ಶೀರ್ಘದಲ್ಲಿ  ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಿ ಎಂದು ತಿಳಿಸಿದರು. 
 
ಮೈಸೂರಿನಲ್ಲೂ ಜಾಗ ಕೊಡ್ತೀವಿ
 
ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದರು. 


ತುಮಕೂರು ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲು ಹಣದ ಆಮಿಷ ತೋರಿಸಿ ಸಾರ್ವಜನಿಕ ಮುಜುಗರಕ್ಕೆ ಒಳಗಾಗಿರುವ ಗ್ರಾಮಾಂತರ ಶಾಸಕ ಸುರೇಶ್ ಗೌಡ ಅವರಿಗೆ ಮುಖ್ಯಮಂತ್ರಿಗಳು ವೇದಿಕೆಯಲ್ಲೇ ಟಾಂಗ್ ಕೊಟ್ಟರು. 
 
ನಾನು 41 ವರ್ಷದಿಂದ ಮಂತ್ರಿ ಆಗಿದ್ದೇನೆ. ಎರಡು ಬಾರಿ ವಿರೋಧ ಪಕ್ಷದ ನಾಯಕ, ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ ಎಂದು ವೇದಿಕೆಯಲ್ಲೆ ಉತ್ತರಿಸಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments