Webdunia - Bharat's app for daily news and videos

Install App

ಕಾರ್ಯಕರ್ತರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ನೀಡಿದ ಸಿಎಂ ಸಿದ್ದರಾಮಯ್ಯ

Krishnaveni K
ಶನಿವಾರ, 13 ಜುಲೈ 2024 (14:32 IST)
ಬೆಂಗಳೂರು: ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರಿಗೆ ಭರವಸೆ ನೀಡಿದರು.
 
ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶನಿವಾರ ನಡೆದ "ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ" (ಅಹವಾಲು ಸ್ವೀಕಾರ) ಕಾರ್ಯಕ್ರಮದಲ್ಲಿ ಮಾತನಾಡಿದರು.
 
ವಿಕಲಚೇತನರ ಬಳಿಗೆ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿಗಳು "ಕಾರ್ಯಕರ್ತರ ಎಲ್ಲಾ ಅಹವಾಲುಗಳನ್ನು ವಿಂಗಡಿಸಿ ನನಗೆ ನೀಡಬೇಕು" ಎಂದು ಅಧಿಕಾರಿಗಳಿಗೆ ತಿಳಿಸಿದರು.
 
ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರರಿಗೆ ಮನೆ ಭಾಗ್ಯ
 
ನಾವು ಕಾಂಗ್ರೆಸ್ ಕಚೇರಿಯಲ್ಲಿ ಹಲವಾರು ವರ್ಷಗಳಿಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಾ ಇದ್ದೇವೆ ನಮಗೆ ಮನೆ ಕೊಡಿ ಎಂದು ಜಯಂತಿ, ಅರ್ಚನಾ, ಸುಗಂಧಿ, ಆಶಾ, ಸಂಧ್ಯಾ ಅವರು ಮನವಿ ಸಲ್ಲಿಸಿದಾಗ "ನಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಾ ಇದ್ದೀರಾ. ನಿಮಗೆ ರಾಜೀವ್ ಗಾಂಧಿ ವಸತಿ ನಿಗಮದ ಅಡಿ ಮನೆ ನೀಡುವಂತೆ ಕ್ರಮ ತೆಗೆದುಕೊಳ್ಳಬೇಕು" ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
 
ಶೇ.90 ರಷ್ಟು ನಿಗಮ ಮಂಡಳಿಯ ಅಧ್ಯಕ್ಷರನ್ನು ನೇಮಕಾತಿ ಮಾಡಲಾಗಿದೆ. ಸುಮಾರು 10-15 ಮಂಡಳಿಗಳಿಗೆ ನಾನು ಮತ್ತು ಕೆಪಿಸಿಸಿ ಅಧ್ಯಕ್ಷರಾದ ಶಿವಕುಮಾರ್ ಅವರು ಸೇರಿ ಚರ್ಚೆ ನಡೆಸಿ ನೇಮಕಾತಿ ಮಾಡುತ್ತೇವೆ. ಈಗಾಗಲೇ ಜಿಲ್ಲಾ, ತಾಲ್ಲೂಕು  ಗ್ಯಾರಂಟಿ ಸಮಿತಿಗಳಲ್ಲಿ ಅವಕಾಶ ಮಾಡಿಕೊಡಲಾಗಿದೆ. ಜೊತೆಗೆ ಒಂದಷ್ಟು ಮಂಡಳಿಗಳಲ್ಲಿ ನಿರ್ದೇಶಕ ಸ್ಥಾನಕ್ಕೆ ಅವಕಾಶ ಮಾಡಿಕೊಡಲಾಗಿದೆ" ಎಂದು ಹೇಳಿದರು.
 
ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ,ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು. 
 
ನಾನು ಪಕ್ಷಕ್ಕೆ ದುಡಿಯುತ್ತಿದ್ದು, ಒಂದು ಮನೆ ಮಂಜೂರು ಮಾಡಿಕೊಡಿ ಎಂದು ಯಾದಗಿರಿ ಜಿಲ್ಲೆಯ ರಾಮಸಮುದ್ರದ ಚಂದಪಾಷ ಅವರ ಮನವಿಗೆ ಸ್ಪಂದಿಸಿದ ಸಿಎಂ ಅವರು "ನಿಮ್ಮ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಓ ಅವರಿಗೆ ಹೇಳುವೆ ಹಾಗೂ ಸಿಎಂ ಪರಿಹಾರ ನಿಧಿ ಮೂಲಕ ನೀಡುತ್ತೇನೆ" ಎಂದು ಭರವಸೆ ನೀಡಿದರು.
 
ಕೆಎಂಎಫ್ ಸೇರಿದ ವೆಬ್ ಸೈಟ್ ಅಲ್ಲಿನ ಮಾಹಿತಿಯು ಕನ್ನಡ ಹೊರತಾಗಿ ಇಂಗ್ಲಿಷ್, ಗುಜರಾತಿ, ಮರಾಠಿ, ಹಿಂದಿ ಭಾಷೆಯಲ್ಲಿ ಮಾಹಿತಿಯಿದ್ದು ಕನ್ನಡ ಮಾಯವಾಗಿದೆ ಎಂದು ಚಾಮರಾಜನಗರದ ಎಸ್. ಶಿವನಾಗಪ್ಪ ಅವರು ಮನವಿ ಸಲ್ಲಿಸಿದಾಗ ಕೆಎಂಎಫ್ ಅಧಿಕಾರಿಗೆ ಕರೆ ಮಾಡಿ "ಕನ್ನಡದಲ್ಲಿ ಮಾಹಿತಿಯನ್ನು ಏಕೆ ಕೊಟ್ಟಿಲ್ಲ, ಕೂಡಲೇ ಕನ್ನಡದಲ್ಲಿ ಮಾಹಿತಿ ದೊರೆಯುವಂತೆ ಮಾಡಿ" ಎಂದು ಸೂಚನೆ ನೀಡಿದರು.
 
ರಾಜ್ಯಸಭಾ ಸಂಸದರಾದ ಜಿ. ಸಿ. ಚಂದ್ರಶೇಖರ್, ಶಾಸಕರಾದ ತನ್ವೀರ್ ಸೇಟ್ ಅವರು ಅಹವಾಲು ಸಲ್ಲಿಕೆ  ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಾಥ್ ನೀಡಿದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಆರ್ಕಿಟೆಕ್ಚರ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಮೂವರು ಕ್ಲಾಸ್‌ಮೇಟ್‌ಗಳ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲೂ ಕಳ್ಳಾಟ ನಡೆದಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ಮುಂದಿನ ಸುದ್ದಿ
Show comments