Select Your Language

Notifications

webdunia
webdunia
webdunia
webdunia

ಸಿಎಂ ಸಿದ್ರಾಮಯ್ಯರದ್ದು ಭ್ರಷ್ಟಾಚಾರ ರಹಿತ ಸರಕಾರ: ವೀರಪ್ಪ ಮೊಯ್ಲಿ

ಸಿಎಂ ಸಿದ್ರಾಮಯ್ಯರದ್ದು ಭ್ರಷ್ಟಾಚಾರ ರಹಿತ ಸರಕಾರ: ವೀರಪ್ಪ ಮೊಯ್ಲಿ
ಬೆಂಗಳೂರು , ಮಂಗಳವಾರ, 24 ಅಕ್ಟೋಬರ್ 2017 (13:32 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಭ್ರಷ್ಟಾಚಾರ ರಹಿತ ಸರಕಾರವಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪಾ ಮೊಯ್ಲಿ ಶ್ಲಾಘಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯರಾಗಲಿ ಅಥವಾ ಸಚಿವರಾಗಲಿ ಯಾರ ಮೇಲೂ ಗಂಭೀರವಾದ ಭ್ರಷ್ಟಾಚಾರ ಆರೋಪಗಳು ಬಂದಿಲ್ಲ ಎಂದು ಸಂತಸ ವ್ಯಕ್ತಪಡಿಸಿದರು.
 
ಮೋದಿ ಸರಕಾರ ಜಾರಿಗೆ ತಂದ ನೋಟ್ ಬ್ಯಾನ್, ಜಿಎಸ್‌ಟಿಯಿಂದ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಸೂಕ್ತ ಸಮಯದಲ್ಲಿ ಮತದಾರರು ಬಿಜೆಪಿಗೆ ತಿರುಗೇಟು ನೀಡಲಿದ್ದಾರೆ ಎಂದರು.
 
ಹಿಮಾಚಲ ಮತ್ತು ಗುಜರಾತ್ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಸೋಲು ಖಚಿತವಾಗಿದ್ದರಿಂದ ಮೋದಿ, ಅಮಿತ್ ಶಾ ಚಿಂತಿತರಾಗಿದ್ದಾರೆ ಎಂದು ಲೇವಡಿ ಮಾಡಿದರು.
 
ಟಿಪ್ಪು ಜಯಂತಿ ಆಚರರಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಕೇವಲ ರಾಜಕೀಯ ಕಾರಣಕ್ಕಾಗಿ ಬಿಜೆಪಿ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವೀರಪ್ಪಾ ಮೊಯ್ಲಿ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಟಿಪ್ಪು ಜಯಂತಿ: ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ಸಿಎಂ ಎಚ್ಚರಿಕೆ