Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಸರಕಾರ ಅವನತಿಯ ಅಂಚಿನಲ್ಲಿ: ಬಿಎಸ್‌ವೈ ಭವಿಷ್ಯ

ಸಿಎಂ ಸಿದ್ದರಾಮಯ್ಯ ಸರಕಾರ ಅವನತಿಯ ಅಂಚಿನಲ್ಲಿ: ಬಿಎಸ್‌ವೈ ಭವಿಷ್ಯ
ಬೆಂಗಳೂರು: , ಬುಧವಾರ, 1 ನವೆಂಬರ್ 2017 (13:46 IST)
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅವನತಿಯ ಅಂಚಿನಲ್ಲಿದ್ದು, ಶೀಘ್ರದಲ್ಲಿಯೇ ಉರುಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಿನಿಂದ ನವ ಕರ್ನಾಟಕ ಪರಿವರ್ತನಾ ಯಾತ್ರೆ ರಾಜ್ಯದಲ್ಲಿ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದ್ದು, ರಾಜ್ಯ ಸರಕಾರದ ಭ್ರಷ್ಟಾಚಾರ, ದುರಾಡಳಿತವನ್ನು ಜನತೆಯ ಮುಂದಿಡಲಾಗುವುದು ಎಂದು ತಿಳಿಸಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಸರಕಾರದಿಂದ ಜನತೆ ಬೇಸತ್ತಿದ್ದಾರೆ. ಸರಕಾರ ಯಾವಾಗ ಅಂತ್ಯಗೊಳ್ಳುತ್ತದೆಯೋ ಎಂದು ಕಾಯುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 
ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ನಾಳೆಯಿಂದ ಆರಂಭವಾಗಲಿದ್ದು ಸರ್ವ ಸಿದ್ದತೆಗಳು ಪೂರ್ಣಗೊಂಡಿವೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆದೇಶದ ಮೇರೆಗೆ, ಐತಿಹಾಸಿಕ ಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
 
75 ದಿನಗಳ ಕಾಲ ಬೃಹತ್ ರ್ಯಾಲಿ ನಡೆಯಲಿದ್ದು, ಮುಂದಿನ ವರ್ಷ ಜನವರಿ 28 ರಂದು ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾಷಣದೊಂದಿಗೆ ರ್ಯಾಲಿ ಅಂತಿಮಗೊಳ್ಳಲಿದೆ ಎಂದು ತಿಳಿಸಿದ್ದಾರೆ. 
 
ಸುಮಾರು 82 ದಿನಗಳ ಕಾಲ ನಡೆಯುವ ಪರಿವರ್ತನಾ ಯಾತ್ರೆ, ಜನೆವರಿ 28 ರಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿಯವರ ಕಾರ್ಯಕ್ರಮದೊಂದಿಗೆ ಮುಕ್ತಾಯಗೊಳ್ಳಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಅನೈತಿಕ ಸಂಬಂಧ: ಅತ್ತಿಗೆಯ ಕತ್ತಿಗೆ ಬ್ಲೇಡ್ ಹಾಕಿ ಹತ್ಯೆಗೈದ ಮೈದುನ ಅರೆಸ್ಟ್