Select Your Language

Notifications

webdunia
webdunia
webdunia
webdunia

ರೈತರ ಸಾಲ ಮನ್ನಾ ಮಾಡಲು ಸರಕಾರಕ್ಕೆ ಇಚ್ಚಾಶಕ್ತಿಯ ಕೊರತೆ: ಕುಮಾರಸ್ವಾಮಿ

ರೈತರ ಸಾಲ ಮನ್ನಾ ಮಾಡಲು ಸರಕಾರಕ್ಕೆ ಇಚ್ಚಾಶಕ್ತಿಯ ಕೊರತೆ: ಕುಮಾರಸ್ವಾಮಿ
ಬೆಂಗಳೂರು , ಸೋಮವಾರ, 27 ಮಾರ್ಚ್ 2017 (18:50 IST)
ರೈತರ ಸಾಲ ಮನ್ನಾ ಮಾಡಲು ಸರಕಾರಕ್ಕೆ ರಾಜಕೀಯ ಇಚ್ಚಾಶಕ್ತಿಯ ಕೊರತೆಯಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
 
ನಾನು ಮುಖ್ಯಮಂತ್ರಿಯಾಗಿದ್ದಾಗ ಕೇವಲ 20 ದಿನದಲ್ಲಿ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದೆ. ಸರಕಾರ ಮೀಸಲಿಟ್ಟ ಹಣವನ್ನು ಖರ್ಚು ಮಾಡುವಲ್ಲಿ ಕೂಡಾ ವಿಫಲವಾಗಿದೆ ಎಂದು ಕಿಡಿಕಾರಿದರು.
 
ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪ್ರಧಾನಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದರು. ಬಿಎಸ್‌ವೈ ಒತ್ತಾಯಿಸಿರುವ ದಾಖಲೆಗಳನ್ನು ಕುಮಾರಸ್ವಾಮಿ ಸದನದ ಮುಂದಿಟ್ಟರು.
 
ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದರೆ, ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರವಿದೆ. ಸಿಎಂ ಸಿದ್ದರಾಮಯ್ಯ ಪ್ರಧಾನಿ ಮಧ್ಯಪ್ರವೇಶ ಅಗತ್ಯವಿಲ್ಲ ಎನ್ನುವ ಹಠಮಾರಿ ಧೋರಣೆ ತಳೆದಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯನ್ನ ತಿಂದು ಮುಗಿಸಿದ್ದ ಬೀದಿ ನಾಯಿಗಳು..!