Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ವೋಟಿನ ಋಣ ತೀರಿಸಿದ್ದಾರೆ: ಬಜೆಟ್‌ಗೆ ಆರ್‌ ಅಶೋಕ್‌ ಆಕ್ರೋಶ

Sampriya
ಶುಕ್ರವಾರ, 7 ಮಾರ್ಚ್ 2025 (15:48 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 16ನೇ ಬಜೆಟ್‌ನಲ್ಲಿ ಹೊಸತನ ಏನಿಲ್ಲ. ತಮ್ಮ ರಾಜಕೀಯ ಲಾಭಕ್ಕಾಗಿ, ಅಲ್ಪಸಂಖ್ಯಾತರನ್ನು ಓಲೈಸುವ ಸಲುವಾಗಿ ಈ ಬಜೆಟ್ ಮೂಲಕ ಋಣ ತೀರಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

 ಸಿಎಂ ಸಿದ್ದರಾಮಯ್ಯರ ಮಂಡಿಸಿದ 16ನೇ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅಲ್ಪ ಸಂಖ್ಯಾತ ಕಾಲೋನಿಗೆ ಒಂದು ಸಾವಿರ ಕೋಟಿ ಇಟ್ಟಿದ್ದಾರೆ. ಫಾರಿನ್ ಹೋಗಲು 20 ಲಕ್ಷ ಇತ್ತು, ಈಗ 30 ಲಕ್ಷಕ್ಕೆ ಹೆಚ್ಚಿಸಿದ್ದಾರೆ.  ಗುರುದ್ವಾರ ಹೋಗಲು ಎರಡು ಕೋಟಿ, ಕ್ರಿಶ್ಚಿಯನ್ನರಿಗೆ 200 ಕೋಟಿ ಕೊಟ್ಟಿದ್ದಾರೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ವೋಟಿನ ಋಣ ತೀರಿಸ್ತಿದ್ದಾರೆ ತೀರಿಸಿದ್ದಾರೆ ಎಂದು ಕಿಡಿಕಾರಿದರು.

193 ಪೇಜ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಏನೂ ಹೊಸತನವಿಲ್ಲ. ಅಂತ ಅಶೋಕ್ ಕಿಡಿಕಾರಿದ್ದಾರೆ.ಕುಡಿಯಲು ನೀರು ಕೊಡು ಅಂತ ಹೇಳಿದ್ದಾರೆ. ಆದರೆ ನೀರಾವರಿ ಯೋಜನೆಗೆ ಗುಟುಕು ನೀರೂ ಇಲ್ಲ. ಬೆಂಗಳೂರಿನಲ್ಲಿ ಯಾರೂ ರಸ್ತೆ ಮೇಲೆ ಓಡಾಡಲ್ಲ, ಎಲ್ಲಾ ಸುರಂಗದಲ್ಲೇ ಓಡಾಡೋದು ಅಂತ ಅಶೋಕ್ ವ್ಯಂಗ್ಯವಾಡಿದ್ರು.

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ 16ನೇ ಬಜೆಟ್‌ಗೆ ಬಿಜೆಪಿ ನಾಯಕರು ತೀವ್ರಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರಿಗೆ ಭರಪೂರ ಕೊಡುಗೆ ನೀಡಿದ್ದಾರೆ. ಆನೆ, ಕುದುರೆ ಏರಿ ಕೊಂಡು ಹೋದಿರಿ ನೀವು, ಸಿದ್ದರಾಮಯ್ಯ ಅವರು ಸಾಬ್ರು ಜಟಕಾ ಕುದುರೆ ಏರಿ ಹೊರಟಿದ್ದಾರೆ ಅಂತ ಅಶೋಕ್ ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam terror Attack: ಪ್ರತ್ಯಕ್ಷದರ್ಶಿಗಳ ಸಾಕ್ಷಿ ಸಂಗ್ರಹಿಸುತ್ತಿರುವ NIA

ಭಯೋತ್ಪಾದಕರಿಗೂ, ಸಿದ್ದರಾಮಯ್ಯಗೂ ಯಾವುದೇ ವ್ಯತ್ಯಾಸವಿಲ್ಲ: ಅರವಿಂದ ಬೆಲ್ಲದ ಗರಂ

Gold fraud case: ಇಡಿ ದಾಳಿ ವೇಳೆ ಐಶ್ವರ್ಯಾ ಗೌಡ ಮನೆಯಲ್ಲಿ ಸಿಕ್ತು ಕಂತೆ ಕಂತೆ ಹಣ, ಇಲ್ಲಿದೆ ಮಾಹಿತಿ

Namma Metro: ನಮ್ಮ ಮೆಟ್ರೋ ಪ್ರಯಾಣ ಸಮಯದಲ್ಲಿ ನಾಳೆ ಸಣ್ಣ ಬದಲಾವಣೆ

ಕರ್ನಾಟಕದಲ್ಲಿರುವ ಮುಸ್ಲಿಂ ಮಹಿಳೆಯರಿಗೆ ಪಾಕ್‌ ಮೇಲೆ ಎಂತಹ ಪ್ರೇಮ, ಪಾಕ್ ಧ್ವಜಕ್ಕೆ ಗೌರವ

ಮುಂದಿನ ಸುದ್ದಿ
Show comments