ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು: ಇಂದು ಫುಲ್ ರೆಸ್ಟ್

Krishnaveni K
ಮಂಗಳವಾರ, 8 ಜುಲೈ 2025 (15:11 IST)
ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು ಸಮಸ್ಯೆ ಕಾಣಿಸಿಕೊಂಡಿದ್ದು ಇಂದು ಸಂಪೂರ್ಣ ವಿಶ್ರಾಂತಿಯಲ್ಲಿದ್ದಾರೆ. ನಾಳೆ ಮತ್ತೆ ಪೂರ್ವ ನಿಗದಿತ ಕಾರ್ಯಕ್ರಮ ನಿಮಿತ್ತ ದೆಹಲಿಗೆ ತೆರಳಲಿದ್ದಾರೆ.
 

ನಿನ್ನೆ ಸಿಎಂ ಸಿದ್ದರಾಮಯ್ಯ ತಮ್ಮ ಪುತ್ರ ಯತೀಂದ್ರ ಮತ್ತು ಸಚಿವ ಜಮೀರ್ ಅಹ್ಮದ್ ಜೊತೆಗೆ ನಗರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿದ್ದರು. ತಲೆಸುತ್ತು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ಭೇಟಿ ನೀಡಿದ್ದರು ಎನ್ನಲಾಗಿದೆ.

ನಿನ್ನೆಯೇ ಅವರಿಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಲಾಗಿದ್ದು ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹಾಗಿದ್ದರೂ ಇಂದು ಯಾವುದೇ ಪೂರ್ವ ನಿಗದಿತ ಕಾರ್ಯಕ್ರಮವಿಲ್ಲದೇ ಇರುವುದರಿಂದ ಒಂದು ದಿನ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು ರಾಹುಲ್ ಗಾಂಧಿಯವರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.


ಇನ್ನು ಡಿಕೆ ಶಿವಕುಮಾರ್ ಇಂದೇ ದೆಹಲಿಗೆ ತೆರಳಲಿದ್ದು ಅವರೂ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ. ಮೇಲ್ಮನೆಗೆ ಸದಸ್ಯರನ್ನು ಆಯ್ಕೆ ಮಾಡುವ ಕುರಿತು ಹೈಕಮಾಂಡ್ ಜೊತೆ ಸಿಎಂ ಮತ್ತು ಡಿಸಿಎಂ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಧಾನಿಯಲ್ಲಿ ಇನ್ನೆರಡು ದಿನ ಮೈಕೊರೆಯುವ ಚಳಿ: ಕರಾವಳಿಯಲ್ಲಿ ಒಣಹವೆ ಮುಂದುವರಿಕೆ

ಸುವರ್ಣ ವಿಧಾನಸೌಧಕ್ಕೆ 9ರಂದು ರೈತರೊಂದಿಗೆ ಬಿಜೆಪಿ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದೇನು

ಆರನೇ ದಿನವೂ ಮುಗಿಯದ ಇಂಡಿಗೋ ಬಿಕ್ಕಟ್ಟು: ಬೆಂಗಳೂರಿಲ್ಲಿಂದು 50 ವಿಮಾನಗಳ ಹಾರಾಟ ರದ್ದು

ಗೋವಾ ನೈಟ್‌ ಕ್ಲಬ್‌ನಲ್ಲಿ ಅಗ್ನಿ ಅವಘಡದಲ್ಲಿ 23 ಮಂದಿ ಸಜೀವ ದಹನ: ಪ್ರಧಾನಿ, ರಾಷ್ಟ್ರಪತಿ ಕಂಬನಿ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ಮುಂದಿನ ಸುದ್ದಿ
Show comments