Publish Date: Mon, 22 Jan 2024 (19:38 IST)
Updated Date: Mon, 22 Jan 2024 (19:59 IST)
ಬೆಂಗಳೂರು -ಬೆಂಗಳೂರು ಪೂರ್ವ ತಾಲೂಕಿನ ಹಿರಂಡಹಳ್ಳಿ ಗ್ರಾಮದಲ್ಲಿರುವ ಶ್ರೀರಾಮ ಮಂದಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸಚಿವರಾದ ಭೈರತಿ ಸುರೇಶ್, ಈಶ್ವರ್ ಖಂಡ್ರೆ, ರಾಮಲಿಂಗರೆಡ್ಡಿ ಮತ್ತು ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಭಾಗಿಯಾಗಿದ್ದರು.
ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ಗಾಂಧಿಜಿಯವರ ರಾಮನನ್ನು ಪೂಜಿಸುತ್ತೇವೆ. ಬಿಜೆಪಿಯ ರಾಮನನ್ನು ಪೂಜಿಸಲ್ಲ. ಗಾಂಧಿಜಿ ಪ್ರಾಣ ಬಿಡುವಾಗಲೂ ಹೇ ರಾಮ್ ಎಂದು ಪ್ರಾಣ ಬಿಟ್ಟರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.