ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾದ ನಮ್ಮ ಮೆಟ್ರೋ ಸುರಂಗ ಮಾರ್ಗವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.
ವಿಧಾನಸೌಧದ ಬಳಿಯಿರುವ ಸುರಂಗ ಮಾರ್ಗಕ್ಕೆ ಕೇಂದ್ರ ನಗರಾಭಿವೃದ್ಧಿ ಇಲಾಖೆ ಸಚಿವ ವೆಂಕಯ್ಯ ನಾಯ್ಡು, ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಪೂರ್ವ ಪಶ್ಚಿಮ ಕಾರಿಡಾರ್ನ 4.8 ಕಿ.ಮೀ ಸುರಂಗ ಮಾರ್ಗ ಜನನಿಬಿಡತೆಯಿಂದ ಬಳಲುತ್ತಿರುವ ಬೆಂಗಳೂರು ಪ್ರಯಾಣಿಕರಿಗೆ ಮೆಟ್ರೋ ಸುರಂಗ ಮಾರ್ಗ ವರದಾನವಾದಂತಾಗಿದೆ.
ಸುರಂಗ ಮೆಟ್ರೋದಲ್ಲಿ ಗಣ್ಯರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ವೆಂಕಯ್ಯಾ ನಾಯ್ಡು, ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್, ಕೈಗಾರಿಕೆ ಸಚಿವ ಆರ್.ವಿ.ದೇಶಪಾಂಡೆ, ವಾರ್ತಾ ಸಚಿವ ರೋಷನ್ ಬೇಗ್, ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಶಾಸಕರು, ಸಂಸದರು, ಸಚಿವರು ಪ್ರಯಾಣದ ಆನಂದ ಸವಿದರು.
ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ಹಾಗೂ ಕೆಂಪೇಗೌಡ ಮೆಟ್ರೋ ನಿಲ್ದಾಣಗಳನ್ನು ಅಲಂಕರಿಸಲಾಗಿತ್ತು.