ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಕುರಿತು ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಎಂಗೆ ಮಾನಸಿಕ ಸ್ಥಿತಿ ಸರಿ ಇಲ್ಲ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. .
ಮುಖ್ಯಮಂತ್ರಿ ಸ್ಥಾನವನ್ನು ಇನ್ನೂ ಆರು ತಿಂಗಳಲ್ಲಿ ಕಳೆದುಕೊಳ್ಳಲಿರುವ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ನೀಡುವ ಮಾರ್ಕ್ಸ್ ಯಾರಿಗೆ ಬೇಕು. ಸಿದ್ದರಾಮಯ್ಯ ಅವರು ಔಟ್ ಗೋಯಿಂಗ್ ವ್ಯಕ್ತಿ, ಅವರ ಮಾತಿಗೆ ಬೆಲೆನೇ ಇಲ್ಲ ಎಂದುಮೈಸೂರಿನಲ್ಲಿ ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದ ಗೃಹ ಸಚಿವರು ತಮ್ಮ ಗೃಹಕ್ಕೆ ಮಾತ್ರ ಸಚಿವರಾಗಿದ್ದಾರೆ ಎಂದು ಪರಮೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಎಷ್ಟು ಜನ ಸಿಎಂ ಆಗಲು ಕಾದು ಕೂತಿದ್ದಾರೆ. ಡಿಕೆ ಮಾಟಮಂತ್ರ ಎಲ್ಲಾ ಮಾಡಿಟ್ಟುಕೊಂಡು ಸಿಎಂ ಕುರ್ಚಿಗೆ ಟವೆಲ್ ಸುತ್ತಿದ್ದಾರೆ. ಪರಮೇಶ್ವರ್, ಎಂ.ಬಿ ಪಾಟೀಲ್ ಎಲ್ಲರೂ ಸಿಎಂ ಆಗಲು ಕಾದಿದ್ದಾರೆ. ಕರ್ನಾಟಕದಲ್ಲಿ ಸಿಎಂ ಪದವಿ ಖಾಲಿ ಆಗುತ್ತಿದೆ. ರಾಜ್ಯ ಸರ್ಕಾರ ನೆಗೆದು ಬಿದ್ದು ನೆಲ್ಲಿಕಾಯಿ ಆಗಲಿ ಎಂದು ರಾಜ್ಯದ ಜನ ಕಾಯುತ್ತಿದ್ದಾರೆ ಎಂದು ಹೇಳಿದರು.