Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನ ಕೊನೆಯ ಸಿಎಂ: ಶೆಟ್ಟರ್

ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್‌ನ ಕೊನೆಯ ಸಿಎಂ: ಶೆಟ್ಟರ್
ಹುಬ್ಬಳ್ಳಿ , ಸೋಮವಾರ, 6 ನವೆಂಬರ್ 2017 (19:27 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಕೊನೆಯ ಕಾಂಗ್ರೆಸ್ ಮುಖ್ಯಮಂತ್ರಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ರಾಜ್ಯದಲ್ಲಿ ಇನ್ನೆಂದು ಕಾಂಗ್ರೆಸ್ ಪಕ್ಷ ಅದಿಕಾರಕ್ಕೆ ಬರೋಲ್ಲ. ನಮ್ಮ ರ್ಯಾಲಿ ವಿಫಲಗೊಳಿಸಲು ಷಡ್ಯಂತ್ರ ನಡೆಸಿದೆ. ಬೈಕ್ ರ್ಯಾಲಿ ತಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಕಾಂಗ್ರೆಸ್‌ನವರು ಎಷ್ಟೇ ಪ್ರಯತ್ನಿಸಿದರೂ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ. ಮುಂದಿನ ಸರಕಾರ ನಮ್ಮ ಸರಕಾರವಾಗಲಿದೆ ಎಂದು ಗುಡುಗಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟದ ಸದಸ್ಯರು ವ್ಯಾಪಕ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ರಾಜ್ಯದ ಜನತೆ ಕಾಂಗ್ರೆಸ್ ಸರಕಾರದ ಬಗ್ಗೆ ಬೇಸತ್ತು ಹೋಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಯಾವ ಯಾತ್ರೆ ಮಾಡಿದ್ರೂ ಕಾಂಗ್ರೆಸ್‍ಗೆ ಜಯ ಖಚಿತ: ಕೆ.ಸಿ.ವೇಣುಗೋಪಾಲ್