Webdunia - Bharat's app for daily news and videos

Install App

ಡಿಕೆ ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್ ಮಾಡಿದ್ದರಂತೆ

Krishnaveni K
ಶನಿವಾರ, 8 ಜೂನ್ 2024 (15:19 IST)
ಬೆಂಗಳೂರು: ಈ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಡಿಕೆ ಶಿವಕುಮಾರ್ ಸಹೋದರ, ಡಿಕೆ ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಮತ್ತು ಟೀಂ ತಂತ್ರಗಾರಿಕೆಯೇ ಕಾರಣ ಎಂದು ಶಾಸಕ ಸುರೇಶ್ ಗೌಡ ಗಂಭೀರ ಆರೋಪ ಮಾಡಿದ್ದಾರೆ.

ಒಂದು ವೇಳೆ ಡಿಕೆ ಸುರೇಶ್ ಗೆದ್ದಿದ್ದರೆ ಡಿಕೆ ಶಿವಕುಮಾರ್ ಗೆ ಅದು ಪ್ಲಸ್ ಪಾಯಿಂಟ್ ಆಗುತ್ತಿತ್ತು. ಈ ಲೋಕಸಭೆ ಚುನಾವಣೆ ಗೆಲುವಿನ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಗೆ ಬೇಡಿಕೆಯಿಡಲಿದ್ದಾರೆ ಎಂಬ ಸುದ್ದಿಗಳಿತ್ತು. ಅದರ ಬೆನ್ನಲ್ಲೇ ಈಗ ಸಹೋದರನ ಸೋಲು ಡಿಕೆಶಿಗೆ ಹಿನ್ನಡೆಯಾಗಿದೆ.

ಇದರ ನಡುವೆ ಶಾಸಕ ಸುರೇಶ್ ಗೌಡ, ಸಿದ್ದರಾಮಯ್ಯ, ಪರಮೇಶ್ವರ್, ಜಾರಕಿಹೊಳಿ ಎಲ್ಲರೂ ಸೇರಿಕೊಂಡು ಸುರೇಶ್ ಸೋಲಿಸಲಿದ್ದಾರೆ  ಎಂದು ಒಂದು ತಿಂಗಳ ಹಿಂದೆಯೇ ಹೇಳಿದ್ದೆ. ಅದೀಗ ನಿಜವಾಗಿದೆ. ಸಿದ್ದರಾಮಯ್ಯನವರೇ ಸಿಎಂ ಆಗಿಯೇ ಮುಂದುವರಿಯಬೇಕು ಎಂದು ಒಂದು ಅಹಿಂದಾ ಟೀಂ ಕೆಲಸ ಮಾಡುತ್ತಲೇ ಇರುತ್ತದೆ. ಅದೇ ಟೀಂ ಈಗ ಡಿಕೆ ಸುರೇಶ್ ಅವರನ್ನು ಸೋಲಿಸಿದೆ. ಇದೆಲ್ಲಾ ಸಂಚಿನ ಭಾಗ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬಾರದೆಂದು ಈ ರೀತಿ ಮಾಡಿದ್ದಾರೆ. ಡಿಕೆಶಿ ನೈತಿಕತೆ ಕುಸಿಯಬೇಕು ಎಂದು ಮಾಡಿದ್ದಾರೆ. ಈಗ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲ್ಲ. ಕಾಂಗ್ರೆಸ್ ನಲ್ಲಿ ಒಳಜಗಳವಾಗುತ್ತದೆ. ರಾಜಕೀಯ ಧ್ರವೀಕರಣವಾಗುತ್ತದೆ. ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಸುರೇಶ್ ಗಂಭೀರ ಆರೋಪ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments