ಸಿಎಂ ಸಿದ್ದು ಜನಸ್ಪಂದನ ಕಾರ್ಯಕ್ರಮ: ನೋಂದಣಿ ಮಾಡಿಸಿಕೊಳ್ಳುವುದು ಹೇಗೆ ತಿಳಿಯಿರಿ

Krishnaveni K
ಗುರುವಾರ, 8 ಫೆಬ್ರವರಿ 2024 (09:27 IST)
Photo Courtesy: Twitter
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಜನಸ್ಪಂದನ ಕಾರ್ಯಕ್ರಮ ಇಂದು ವಿಧಾನಸೌಧದ ಮುಂಭಾಗ ನಡೆಯಲಿದೆ. ಇದಕ್ಕಾಗಿ ಸಾರ್ವಜನಿಕರು ತಮ್ಮ ಗುರುತಿನ ಚೀಟಿಯೊಂದಿಗೆ ಬಂದು ನೋಂದಣಿ ಮಾಡಬೇಕಾಗುತ್ತದೆ.

ಜನರ ಸಮಸ್ಯೆಗಳನ್ನು ಆಲಿಸಲು ಖುದ್ದು ಸಿಎಂ ಸಿದ್ದರಾಮಯ್ಯನವರೇ ಉಪಸ್ಥಿತರಿರಲಿದ್ದಾರೆ. ಅಲ್ಲದೆ, ಆದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸಲು ಅಧಿಕಾರಿಗಳನ್ನೂ ಬರಲು ಸೂಚನೆ ನೀಡಿದ್ದಾರೆ. ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಾವಿರಾರು ಮಂದಿ ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ 10 ಸಾವಿರಕ್ಕೂ ಅಧಿಕ ಆಸನ ವ್ಯವ‍ಸ್ಥೆ, ಎಲ್ ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ.

ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯ
ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಾದರೆ ಸಾರ್ವಜನಿಕರು ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯಂತಹ ಗುರುತಿನ ಚೀಟಿಯೊಂದಿಗೆ ಬಂದು ನೋಂದಣಿ ಮಾಡಿಸಿಕೊಳ್ಳಬೇಕು. ರಿಜಿಸ್ಟರ್ ಮಾಡಿಸಿಕೊಳ್ಳುವಾಗ ಯಾವ ಇಲಾಖೆ ಸಮಸ್ಯೆ ಎಂದು ವಿಚಾರಿಸಿ ಆಯಾ ಇಲಾಖೆಯ ಕೌಂಟರ್ ನಂಬರ್ ಕೊಡಲಾಗುತ್ತದೆ. ಆ ಕೌಂಟರ್ ಬಳಿ ಸಾರ್ವಜನಿಕರು ತಮ್ಮ ಮನವಿ ಕೊಡಬಹುದು. ಕೌಂಟರ್ ಗಳಲ್ಲಿ ಮೊದಲು ಅಧಿಕಾರಿಗಳು ಅರ್ಜಿ ಸ್ವೀಕರಿಸುತ್ತಾರೆ. ಬಳಿಕ ಸಿಎಂ ಸಿದ್ದರಾಮಯ್ಯನವರೇ ಆ ಅರ್ಜಿಗಳನ್ನು ಪರಿಶೀಲಿಸಲಿದ್ದಾರೆ. ಆನ್ ಲೈನ್ ನಲ್ಲೂ ನೋಂದಣಿ ಮಾಡಿಸಿಕೊಳ್ಳಬಹುದಾಗಿದ್ದು, 1902 ಸಂಖ್ಯೆಗೆ ಕರೆ ಮಾಡಿ ರಿಜಿಸ್ಟರ್ ಮಾಡಬಹುದಾಗಿದೆ.

ಜನಸ್ಪಂದನ ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗಾಗಿ ಉಪಹಾರ, ನೀರಿನ ವ್ಯವಸ್ಥೆ ಮಾಡಲಾಗಿದೆ. ಜನಸ್ಪಂದನಕ್ಕೆ ಬರುವ ಸಾರ್ವಜನಿಕರಿಗೆ ಮೆಜೆಸ್ಟಿಕ್ ನಿಂದ ಮತ್ತು ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಶ್ರಫ್ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಭರತ್‌ಗೆ ಬಿಗ್ ಶಾಕ್

ಐಷರಾಮಿ ಕಾರಿಗೆ ಬೇಡಿಕೆಯಿಟ್ಟ ಮಗ, ಕಬ್ಬಿಣದ ಸರಳಿನಿಂದ ಹೊಡೆದ ಅಪ್ಪನ ವಿರುದ್ಧ ಬಿತ್ತು ದೊಡ್ಡ ಕೇಸ್

ಬೆಂಗಳೂರಿನಲ್ಲಿ ಟ್ರಾಫಿಕ್ ಇರೋದು ಒಳ್ಳೇದು ಅನ್ನೋದಾ ಸಚಿವ ಪ್ರಿಯಾಂಕ್ ಖರ್ಗೆ

ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿ ಗಣತಿ: ವಿಜಯೇಂದ್ರ

ಶಾಂತಿ ನೊಬೆಲ್‌ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಡೊನಾಲ್ಡ್‌ ಟ್ರಂಪ್‌ಗೆ ನಿರಾಸೆ: ಸಿಕ್ಕಿದ್ದು ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments