Webdunia - Bharat's app for daily news and videos

Install App

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್

Krishnaveni K
ಶನಿವಾರ, 7 ಜೂನ್ 2025 (18:09 IST)
ಬೆಂಗಳೂರು: ಇಂದು ಮುಸ್ಲಿಮರ ಪವಿತ್ರ ಬಕ್ರೀದ್ ಹಬ್ಬವಾಗಿದ್ದು, ಈ ಬಾರಿ ಸಿಎಂ ಸಿದ್ದರಾಮಯ್ಯ ಬಕ್ರೀದ್ ಆಚರಣೆಯಿಂದ ದೂರವುಳಿದಿದ್ದಾರೆ. ಇದಕ್ಕೆ ಚಿನ್ನಸ್ವಾಮಿ ಪ್ರಕರಣದಿಂದ ಉಂಟಾಗಿರುವ ಮುಜುಗರವೇ ಕಾರಣ ಎನ್ನಲಾಗುತ್ತಿದೆ.


ಸಾಮಾನ್ಯವಾಗಿ ಸಿಎಂ ಸಿದ್ದರಾಮಯ್ಯ ಈದ್, ಬಕ್ರೀದ್ ಹಬ್ಬಗಳ ಸಂದರ್ಭದಲ್ಲಿ ಮುಸ್ಲಿಂ ಬಾಂಧವರೊಂದಿಗೆ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುತ್ತಾರೆ. ಸಚಿವ ಜಮೀರ್ ಅಹ್ಮದ್ ಜೊತೆಗೆ ಪ್ರಾರ್ಥನೆಯಲ್ಲಿ ಭಾಗಿಯಾಗುತ್ತಾರೆ. ಆದರೆ ಈ ಬಾರಿ ದೂರವೇ ಉಳಿದಿದ್ದಾರೆ.

ಇದಕ್ಕೆ ಚಿನ್ನಸ್ವಾಮಿ ಪ್ರಕರಣದಿಂದ ಸರ್ಕಾರಕ್ಕಾಗಿರುವ ಮುಜುಗರವೇ ಕಾರಣ ಎನ್ನಲಾಗುತ್ತಿದೆ. ಚಿನ್ನಸ್ವಾಮಿ ದುರಂತಕ್ಕೆ ಪೊಲೀಸರನ್ನು ಹೊಣೆಗಾರರನ್ನಾಗಿ ಮಾಡಿ ಸರ್ಕಾರ ಕಮಿಷನರ್ ದಯಾನಂದ್ ಸೇರಿದಂತೆ ಪ್ರಮುಖರನ್ನು ಅಮಾನತು ಮಾಡಿದೆ. ಆದರೆ ಇದು ಸರ್ಕಾರಕ್ಕೇ ಮುಳುವಾಗಿದೆ.

ಸರ್ಕಾರದ ಕಡೆಯಿಂದಲೇ ಪೊಲೀಸರಿಗೆ ಒತ್ತಡ ಬಂದಿದ್ದರಿಂದಲೇ ಕಾರ್ಯಕ್ರಮ ಮಾಡಲಾಗಿತ್ತು ಎನ್ನಲಾಗಿತ್ತು. ಈ ಎಲ್ಲಾ ಬೆಳವಣಿಗೆಯಿಂದ ಸರ್ಕಾರಕ್ಕೆ ಒಂದು ರೀತಿಯಲ್ಲಿ ಮುಜುಗರವಾಗಿದೆ. ಹಾಗಾಗಿಯೇ ಸಿಎಂ ಬೇರೆ ಎಲ್ಲಾ ಕಾರ್ಯಕ್ರಮಗಳಿಂದ ದೂರವುಳಿದಿದ್ದಾರೆ.

ಈ ಬಾರಿ ರಂಜಾನ್ ಪ್ರಾರ್ಥನೆಯಲ್ಲೂ ಸಿಎಂ ಸಿದ್ದರಾಮಯ್ಯ ಭಾಗಿಯಾಗಿರಲಿಲ್ಲ. ಆದರೆ ಆಗ ಅವರಿಗೆ ಮಂಡಿ ನೋವಿನ ಸಮಸ್ಯೆ ಹೆಚ್ಚಾಗಿತ್ತು. ಹೀಗಾಗಿಯೇ ಭಾಗಿಯಾಗಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ಕೊಟ್ಟಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments