ರಾಗಿ ಹೆಲ್ತ್ ಮಿಕ್ಸ್ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

geetha
ಗುರುವಾರ, 22 ಫೆಬ್ರವರಿ 2024 (16:49 IST)
ಬೆಂಗಳೂರು-ಸರಕಾರಿ ಮತ್ತು ಶಾಲೆಗಳ ಒಂದರಿಂದ ಅನುದಾನಿತ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ರಾಗಿ ಮಿಕ್ಸ್ ನೀಡುವ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.ವಾರದಲ್ಲಿ ಒಂದು  ದಿನ ಕ್ಷೀರಭಾಗ್ಯ ಯೋಜನೆಯ ಬಿಸಿ ಹಾಲಿನಲ್ಲಿ ಮಿಶ್ರಣ ಮಾಡಿ ಕುದಿಸಿ ರಾಗಿ ಹೆಲ್ತ್ ಮಿಕ್ಸ್ ನ್ನು ಮಕ್ಕಳಿಗೆ ನೀಡಲಾಗುತ್ತದೆ .
 
ನಗರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ 2013 ರಲ್ಲಿ ನಮ್ಮ ಸರ್ಕಾರ ಬಂದಾಗ ನಮ್ಮಲ್ಲಿ ಹಾಲು ಉತ್ಪಾದನೆ ಹೆಚ್ಚಾಯಿತು. ಈ ಹೆಚ್ಚುವರಿ ಹಾಲಿನ ಮಾರಾಟ ಮತ್ತು ಹಾಲಿನ ಉಪ ಉತ್ಪನ್ನಗಳನ್ನು ಹೆಚ್ಚುವರಿಯಾಗಿ ಉತ್ಪಾದನೆ ಮಾಡಲು ಸಾಧ್ಯವಿರಲಿಲ್ಲ. ಹೀಗಾಗಿ ಆ ಕೂಡಲೇ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ ಐದು ದಿನ ಹಾಲು ಕೊಡುವ ಕ್ಷೀರಭಾಗ್ಯ ಯೋಜನೆಯನ್ನು ಆರಂಭಿಸಿದೆ. KMF ಮೂಲಕ ಮಕ್ಕಳಿಗೆ ಹಾಲು ಹೋಗುತ್ತದೆ. 
 
ಈ ಹಾಲಿನ ಹಣವನ್ನು ಸರ್ಕಾರ KMF ಗೆ ನೀಡುತ್ತದೆ. ಆ ಮೂಲಕ KMF ಗೆ ಹಾಲು ಸರಬರಾಜು ಮಾಡುವ ರೈತರಿಗೆ ನೆರವಾಗುವ ತೀರ್ಮಾನ ಮಾಡಿದೆವು. ಇದರ ಜತೆಗೆ ಕಳೆದ ಬಜೆಟ್ ನಲ್ಲಿ ಶಾಲಾ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಶುರು ಮಾಡಿದೆವು. ಈಗ ಅತ್ಯಂತ ಪೌಷ್ಠಿಕವಾದ ರಾಗಿ ಮಾಲ್ಟ್ ಕೊಡುವ ಕಾರ್ಯಕ್ರಮ ಚುರುಕುಗುತ್ತಾರೆ.ಇದರಿಂದ ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಕ್ಕಳಿಗೆ ರಕ್ತಹೀನತೆ ಬರಲೇಬಾರದು. ಪೌಷ್ಠಿಕಾಂಶ ಕೊರತೆ ಆಗಲೇಬಾರದು. ಆಗ ಮಾತ್ರ ಮಕ್ಕಳು ಮಾನಸಿಕವಾಗಿ ಸದೃಡವಾಗಿ ಓದಿನಲ್ಲಿ ಹೆಚ್ಚು ಚುರುಕಾಗುತ್ತಾರೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಈ ಒಂದು ಕೆಲಸ ಮಾಡಲಿದ್ದಾರೆ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಳಿ ರಾಜೀನಾಮೆ ಕೇಳಲು ರಾಹುಲ್ ಗಾಂಧಿ ಮನವೊಲಿಸಿದ ವ್ಯಕ್ತಿ ಯಾರೆಂದು ಬಯಲು

ಸಿಎಂ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಬೆನ್ನಲ್ಲೇ ಇಂದು ಸಿದ್ದರಾಮಯ್ಯ, ಡಿಕೆಶಿ ಒಂದೇ ವೇದಿಕೆಯಲ್ಲಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆ, ತಪ್ಪದೇ ಗಮನಿಸಿ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಮುಂದಿನ ಸುದ್ದಿ
Show comments