Webdunia - Bharat's app for daily news and videos

Install App

ಸಿಗಂದೂರು ಸೇತುವೆ ಉದ್ಘಾಟನೆಗೆ ಕರೆದಿಲ್ಲ: ಮೋದಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ

Krishnaveni K
ಮಂಗಳವಾರ, 15 ಜುಲೈ 2025 (11:36 IST)
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಿಗಂದೂರಿನಲ್ಲಿ ನಿನ್ನೆ ಲೋಕಾರ್ಪಣೆಯಾಗಿರುವ ದೇಶದ ಎರಡನೇ ಅತೀ ದೊಡ್ಡ ಕೇಬಲ್ ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ತನ್ನನ್ನು ಮುಂಚಿತವಾಗಿ ಕರೆದಿಲ್ಲ ಎಂಬುದು ಸಿಎಂ ಸಿದ್ದರಾಮಯ್ಯ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ಸಾರಿಗೆ ಸಚಿವೆ ನಿತಿನ್ ಗಡ್ಕರಿ ಬಳಿಕ ಅವರೀಗ ನೇರವಾಗಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಮೋದಿಗೆ ಪತ್ರ ಬರೆದು ಶಿಷ್ಟಾಚಾರ ಉಲ್ಲಂಘನೆಯಾಗದಂತೆ ತಕ್ಕ ಕ್ರಮ ಕೈಗೊಳ್ಳಿ ಎಂದು ಸಲಹೆ ನೀಡಿದ್ದಾರೆ. ಸಿದ್ದರಾಮಯ್ಯ ಬರೆದ ಪತ್ರದ ಸಾರಾಂಶ ಇಲ್ಲಿದೆ ನೋಡಿ.

‘ಇಂದು ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ‌ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಅಂಬಾರಗೋಡ್ಲು - ಕಳಸವಳ್ಳಿ ಸೇತುವೆ ಉದ್ಘಾಟನೆಯೂ ಸೇರಿದಂತೆ ಹಲವು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

ರಾಜ್ಯ ಸರ್ಕಾರವನ್ನು ಸಂಪರ್ಕಿಸದೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಮಾತ್ರವಲ್ಲ,  ಮುಂಚಿತವಾಗಿ ಕಾರ್ಯಕ್ರಮ ಆಯೋಜನೆಯ ವಿಷಯವನ್ನು ತಿಳಿಸದೆ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರನ್ನು ಕೂಡ ಮುದ್ರಿಸಲಾಗಿತ್ತು.

ಆಹ್ವಾನ ಪತ್ರಿಕೆಯಲ್ಲಿ ಹೆಸರು ಹಾಕುವುದರಿಂದ  ಹಿಡಿದು ಆಹ್ವಾನ ನೀಡುವ ವರೆಗೆ ಎಲ್ಲಾ ಹಂತಗಳಲ್ಲಿಯೂ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಂಘರ್ಷಕ್ಕೆ ಕಾರಣವಾಗಬಹುದಾದ ಈ ನಡೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು.
ಇದನ್ನು ರಾಜ್ಯ ಸರ್ಕಾರವು ಬಲವಾಗಿ ಖಂಡಿಸುತ್ತದೆ. ಮುಂದಿನ ದಿನಗಳಲ್ಲಿ ಇಂತಹ  ಲೋಪಗಳಾಗದಂತೆ ತಮ್ಮ ಎಲ್ಲಾ ಸಂಪುಟ ಸಹೋದ್ಯೋಗಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡುತ್ತೀರೆಂದು ನಾನು ಭಾವಿಸಿದ್ದೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಶಸ್ವಿಯಾಗಿ ಭೂಮಿಗೆ ಬಂದ ಶುಭಾಂಶು ಶುಕ್ಲಾ ಟೀಂ, ಬಾಹ್ಯಾಕಾಶ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು

ಡ್ರಗ್ಸ್ ಸ್ವರ್ಗವಾಗುತ್ತಿದೆ ಕರ್ನಾಟಕ: ಎನ್.ರವಿಕುಮಾರ್

ದೇಶಕ್ಕೆ, ರಾಜ್ಯಕ್ಕೆ ಕಾದಿದೆ ಗಂಡಾಂತರ: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ದೇವನಹಳ್ಳಿ ರೈತರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ: 1,777 ಎಕರೆ ಭೂ ಸ್ವಾಧೀನ ಕೈಬಿಡಲು ತೀರ್ಮಾನ

ಮುಂದಿನ ಸುದ್ದಿ
Show comments