Webdunia - Bharat's app for daily news and videos

Install App

ಕೆಪಿಎಸ್ ಸಿ ಹಗರಣ ಎನ್ನುವ ಬದಲು ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಹಗರಣ ಎಂದುಬಿಡೋದಾ

Krishnaveni K
ಬುಧವಾರ, 12 ಮಾರ್ಚ್ 2025 (16:04 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಇಂದು ಕೆಪಿಎಸ್ ಸಿ ಹಗರಣದ ಬಗ್ಗೆ ಮಾತನಾಡಲು ಹೋಗಿ ಸಿಎಂ ಸಿದ್ದರಾಮಯ್ಯ ಇಂದು ಕೆಪಿಸಿಸಿ ಹಗರಣ ಎಂದು ಎಡವಟ್ಟು ಮಾಡಿಕೊಂಡ ಘಟನೆ ನಡೆದಿದೆ.

ಸದನದಲ್ಲಿ ಇಂದು ಕಲಾಪ ನಡೆಯುತ್ತಿದ್ದಾಗ ಸಿಎಂ ಸಿದ್ದರಾಮಯ್ಯ ಕೆಪಿಎಸ್ ಸಿ ಹಗರಣದ ಬಗ್ಗೆ ಮಾತನಾಡಲು ಆರಂಭಿಸಿದ್ದರು. ಈ ವೇಳೆ ಕರ್ನಾಟಕ ಲೋಕಸೇವಾ ಆಯೋಗ ಕೆಪಿಎಸ್ ಸಿ ಎನ್ನುವ ಬದಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕೆಪಿಸಿಸಿ ಎಂದು ತಪ್ಪಾಗಿ ಹೇಳಿದರು.

ಇದನ್ನೇ ಇಟ್ಟುಕೊಂಡು ಸಿಎಂ ಸಿದ್ದರಾಮಯ್ಯರನ್ನು ವಿಪಕ್ಷ ಬಿಜೆಪಿ ಸದಸ್ಯರು ಕಾಲೆಳೆದರು. ಸಿದ್ದರಾಮಯ್ಯನವರು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಬೇಕೆಂದುಕೊಂಡಿದ್ದಾರೆ. ಅದನ್ನೇ ತಲೆಯಲ್ಲಿಟ್ಟುಕೊಂಡಿರುವ ಕಾರಣ ಕೆಪಿಸಿಸಿ ಎಂದೇ ಬರುತ್ತಿದೆ ಎಂದು ಬಿಜೆಪಿ ಸದಸ್ಯರು ಕಾಲೆಳೆದರು. ಈ ವೇಳೆ ಕೊಂಚ ಗದ್ದಲವೇರ್ಪಟ್ಟಿತು.
ಆಗ ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್ ಏನೋ ಬಾಯ್ತಪ್ಪಿ ಒಂದು ಅಕ್ಷರ ತಪ್ಪಾಯ್ತು. ಅದನ್ನೇ ಇಟ್ಟುಕೊಂಡು ಚರ್ಚೆ ಮಾಡಬೇಕಾ? ಮೊದಲೇ ಸಮಯವಿಲ್ಲ, ನೀವು ಮುಂದುವರಿಸಿ ಎಂದು ಸಿಎಂಗೆ ಮಾತು ಮುಂದುವರಿಸಲು ಸೂಚಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಮುಂದಿನ ಸುದ್ದಿ
Show comments