Publish Date: Mon, 16 Oct 2017 (19:37 IST)
Updated Date: Mon, 16 Oct 2017 (19:40 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಆಧುನಿಕ ರಾವಣನಿದ್ದಂತೆ ಎಂದು ಕೇಂದ್ರ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಉಡುಪಿಯ ಬ್ರಹ್ಮಾವರ್ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಹಂಕಾರ, ಅವ್ಯವಹಾರ, ಅಸಡ್ಡೆ ಸಿಎಂ ಸಿದ್ದರಾಮಯ್ಯರ ಸಾಧನೆಗಳು ಎಂದು ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ಸಿಗರು ಆಧುನಿಕ ಭಸ್ಮಾಸುರರಂತೆ. ಅವರು ಎಲ್ಲಿ ಕೈ ಇಡುತ್ತಾರೆ ಆ ಸ್ಥಳ ಭಸ್ಮವಾಗುತ್ತದೆ. ಇಂತಹ ಕಾಂಗ್ರೆಸ್ ಮುಖಂಡರನ್ನು ಅಧಿಕಾರದಿಂದ ದೂರವಿಡಬೇಕು ಎಂದು ಕರೆ ನೀಡಿದರು.
ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ವಿಶ್ವದಾದ್ಯಂತ ಪ್ರಧಾನಿ ಮೋದಿ ಜನಪ್ರಿಯತೆ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.