ಮುಡಾ ಕೇಸ್: ಸಿಎಂ ಸಿದ್ದರಾಮುಯ್ಯ ಭವಿಷ್ಯ ಕೌಂಟ್ ಡೌನ್ ಶುರು

Krishnaveni K
ಮಂಗಳವಾರ, 24 ಸೆಪ್ಟಂಬರ್ 2024 (08:50 IST)
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ ಕ್ರಮ ಸರಿಯೋ ತಪ್ಪೋ ಎಂದು ಇಂದು ಕೋರ್ಟ್ ಮಹತ್ವದ ತೀರ್ಪು ನೀಡಲಿದೆ.

ಈಗಾಗಲೇ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ಇಂದು ತೀರ್ಪು ಪ್ರಕಟಿಸಲಿದೆ. ನ್ಯಾ. ಎಂ. ನಾಗಪ್ರಸನ್ನ ಇಂದು ತೀರ್ಪು ನೀಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ತೀರ್ಪು ಹೊರಬೀಳುವ ನಿರೀಕ್ಷೆಯಿದೆ. ಈ ತೀರ್ಪು ಸಿದ್ದರಾಮಯ್ಯಗೆ ರಾಜಕೀಯವಾಗಿಯೂ ಮಹತ್ವದ್ದಾಗಲಿದೆ.

ಮುಡಾ ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಕಾರ್ಯಕರ್ತರಾದ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದರು. ಅದರಂತೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ವಿಚಾರ ರಾಜಕೀಯವಾಗಿ ಸಾಕಷ್ಟು ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿದೆ.

ಈ ನಡುವೆ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದರೆ ಅವರ ಕುರ್ಚಿಗೆ ಕಂಟಕ ಬರುವ ಅಪಾಯವೂ ಇದೆ. ಹೀಗಾಗಿ ಸಿದ್ದರಾಮಯ್ಯ ರಾಜ್ಯಪಾಲರ ತೀರ್ಮಾನ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದರ ವಿಚಾರಣೆ ಈಗಾಗಲೇ ಮುಗಿದಿದ್ದು ಇಂದು ತೀರ್ಪು ಬರಲಿದೆ. ಈ ತೀರ್ಪು ಸಿದ್ದರಾಮಯ್ಯನವರ ಭವಿಷ್ಯ ನಿರ್ಧರಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಕಳ್ಳತನ ಮಾಡಲು ಹೋಗಿ ಈ ರೀತಿ ಸಿಕ್ಕಾಕಿಕೊಳ್ಳುವುದಾ, Video

ದಕ್ಷಿಣ ಸ್ಪೇನ್‌ನಲ್ಲಿ ಕಾಡ್ಗಿಚ್ಚಿಗೆ ಕನಿಷ್ಠ 12 ಮಂದಿ ಬಲಿ

ಭಾರೀ ಮಾನ್ಸೂನ್ ಬಳಿಕ ದೆಹಲಿ ವಾಯು ಗುಣಮಟ್ಟದಲ್ಲಿ ಊಹಿಸಲಾಗದ ಬದಲಾವಣೆ

ಭೀಮಾತೀರದ ರೌಡಿಶೀಟರ್‌ ತುಳಸಿರಾಮನ ಪರ ಮಹತ್ವದ ಆದೇಶ

ಮುಂದಿನ ಸುದ್ದಿ
Show comments