ಮೈಸೂರಿಗೆ ಹೋಗಿ ಚಾಮುಂಡಿ ತಾಯಿ ದರ್ಶನ ನೆಪ ಮಾತ್ರ, ಸಿದ್ದರಾಮಯ್ಯ ಉದ್ದೇಶವೇ ಬೇರೆ

Krishnaveni K
ಮಂಗಳವಾರ, 3 ಸೆಪ್ಟಂಬರ್ 2024 (10:39 IST)
ಮೈಸೂರು: ಸಿಎಂ ಸಿದ್ದರಾಮಯ್ಯ ನಿನ್ನೆ ಸಂಜೆಯೇ ತವರು ಮೈಸೂರಿಗೆ ಹೋಗಿದ್ದು, ಈ ಭೇಟಿಯ ಹಿಂದೆ ಬೇರೆಯೇ ಉದ್ದೇಶವಿದೆ ಎಂದು ಈಗ ಬಯಲಾಗಿದೆ.

ಮುಡಾ ಹಗರಣ ಪ್ರಕರಣದಲ್ಲಿ ಕೊಂಚ ನಿರಾಳತೆ ಸಿಕ್ಕ ಬಳಿಕ ಸಿಎಂ ಸಿದ್ದರಾಮಯ್ಯ ಇಂದು ತಾಯಿ ಚಾಮುಂಡಿ ದರ್ಶನ ಮಾಡಲೆಂದೇ ಮೈಸೂರಿಗೆ ತೆರಳಿದ್ದಾರೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಸಿದ್ದರಾಮಯ್ಯ ಮೈಸೂರು ಭೇಟಿ ಹಿಂದೆ ಮತ್ತೊಂದು ಉದ್ದೇಶವೂ ಇದೆ ಎಂದು ತಿಳಿದುಬಂದಿದೆ.

ಮೈಸೂರಿನಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಲಿದೆ. ಮೈಸೂರಿಗೆ ಇಂದು ಸಿಎಂ ಭೇಟಿಯ ಮುಖ್ಯ ಉದ್ದೇಶವೇ ಇದಾಗಿದೆ. ಈ ಸಭೆಗೆ ಮುನ್ನ ಅವರು ಚಾಮುಂಡಿ ತಾಯಿಯ ದರ್ಶನ ಪಡೆಯಲಿದ್ದಾರೆ.

ಆದರೆ ಈ ಸಭೆ ನಡೆಸುವುದಕ್ಕೆ ರಾಜಮಾತೆ ಪ್ರಮೋದಾ ದೇವಿ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಾಧಿಕಾರದ ವತಿಯಿಂದ ಪ್ರಮೋದಾ ದೇವಿಗೆ ಸಭೆಗೆ ಆಹ್ವಾನ ನೀಡಲಾಗಿದೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಅವರು ಸಭೆ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಈಗಾಗಲೇ ಈ ವಿಚಾರ ಕೋರ್ಟ್ ನಲ್ಲಿದೆ. ಹೀಗಿದ್ದರೂ ಸಭೆ ನಡೆಸುತ್ತಿರುವುದು ಕಾನೂನು ಬಾಹಿರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments