Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ಬ್ರಿಟೀಷರಿಗಿಂತ ಕಡಿಮೆಯಿಲ್ಲ: ಸದಾನಂದಗೌಡ

ಸಿಎಂ ಸಿದ್ದರಾಮಯ್ಯ ಬ್ರಿಟೀಷರಿಗಿಂತ ಕಡಿಮೆಯಿಲ್ಲ: ಸದಾನಂದಗೌಡ
ಬೆಂಗಳೂರು , ಭಾನುವಾರ, 30 ಜುಲೈ 2017 (17:14 IST)
ಸಿಎಂ ಸಿದ್ದರಾಮಯ್ಯ ಧರ್ಮವನ್ನು ಒಡೆದು ಆಳುತ್ತಿದ್ದು ಅವರು ಬ್ರಿಟೀಷರಿಗಿಂತ ಕಡಿಮೆಯಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಆರೋಪಿಸಿದ್ದಾರೆ.
 
ಬ್ರಿಟೀಷರು ದೇಶವನ್ನು ಛಿದ್ರ ಛಿದ್ರಗೊಳಿಸಿದಂತೆ, ಸಿಎಂ ಸಿದ್ದರಾಮಯ್ಯ ಕೂಡಾ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
 
ವೀರಶೈವ ಮತ್ತು ಲಿಂಗಾಯುತ ವಿವಾದದಲ್ಲಿ ಅನಗತ್ಯವಾಗಿ ಸರಕಾರ ಮೂಗು ತೂರಿಸುತ್ತಿದೆ. ವೀರಶೈವ ಮತ್ತು ಲಿಂಗಾಯುತ ನಾಯಕರು ಪ್ರತ್ಯೇಕ ಧರ್ಮ ಕುರಿತಂತೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಮರ್ಥರಾಗಿದ್ದಾರೆ. ಸರಕಾರದ ಹಸ್ತಕ್ಷೇಪ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷ ಬ್ರಿಟೀಷರಿಗಿಂತ ಕಡಿಮೆಯಿಲ್ಲ. ಸದಾ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಇದರಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಲಾಭವಾಗುವುದಿಲ್ಲ ಎಂದು ಬಿಜೆಪಿ ಮುಖಂಡ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕಿಡಿಕಾರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸೋನಿಯಾ ಕಾರ್ಯದರ್ಶಿ ಅಹ್ಮದ್ ಪಟೇಲ್ ಗೆಲುವು ಖಚಿತ: ಗೋಯಲ್