Select Your Language

Notifications

webdunia
webdunia
webdunia
webdunia

ದರ್ಶನ್ ಕೇಸ್ ನಲ್ಲಿ ತಲೆ ಹಾಕದಂತೆ ಸಚಿವ ಜಮೀರ್ ಅಹ್ಮದ್ ಗೆ ಸಿಎಂ ಸಿದ್ದರಾಮಯ್ಯ ತಾಕೀತು

Zameer Ahmed

Krishnaveni K

ಬೆಂಗಳೂರು , ಬುಧವಾರ, 12 ಜೂನ್ 2024 (17:38 IST)
ಬೆಂಗಳೂರು: ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಪರವಾಗಿ ಕೇಸ್ ನಲ್ಲಿ ತಲೆ ಹಾಕದಂತೆ ಸಚಿವ ಜಮೀರ್ ಅಹ್ಮದ್ ಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಸಚಿವ ಜಮೀರ್ ಅಹ್ಮದ್ ಜೊತೆಗೆ ದರ್ಶನ್ ಆತ್ಮೀಯ ಸಂಬಂಧವಿದೆ. ಈ ಹಿನ್ನಲೆಯಲ್ಲಿ ದರ್ಶನ್ ಬಂಧನವಾಗುತ್ತಿದ್ದಂತೇ ರಾಜ್ಯ ಸರ್ಕಾರದ ಸಚಿವರ ಪ್ರಭಾವದಿಂದ ಅವರು ಬಚಾವ್ ಆಗಬಹುದು ಎಂಬ ಕುಹುಕಗಳು ಕೇಳಿಬಂದಿದ್ದವು. ಆದರೆ ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಜಮೀರ್ ಗೆ ಕರೆ ಮಾಡಿ ಈ ವಿಚಾರದಲ್ಲಿ ತಲೆ ಹಾಕದಂತೆ ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಜಮೀರ್ ಪುತ್ರನ ಸಿನಿಮಾ ಪ್ರಚಾರ ಕಾರ್ಯಕ್ಕೆ ದರ್ಶನ್ ನೆರವಾಗಿದ್ದರು. ಅಲ್ಲದೆ, ಜಮೀರ್ ಮನೆಗೂ ದರ್ಶನ್ ಆಗಾಗ ಭೇಟಿ ನೀಡುತ್ತಿದ್ದರು. ಆದರೆ ಇದೀಗ ದರ್ಶನ್ ಮೇಲೆ ದಾಖಲಾಗಿರುವುದು ಹಲ್ಲೆ ಮತ್ತು ಹತ್ಯೆ ಪ್ರಕರಣ. ಈ ಪ್ರಕರಣದಲ್ಲಿ ಸಚಿವರೇನಾದರೂ ಒತ್ತಡ ಹಾಕಲು ಹೋದರೆ ಅದರಿಂದ ಸರ್ಕಾರಕ್ಕೇ ಕೆಟ್ಟ ಹೆಸರು.

ಹೀಗಾಗಿ ಕೇಸ್ ನಲ್ಲಿ ನಿನ್ನ ಹೆಸರು ಕೇಳಿಬಂದರೆ ಈ ಹಿಂದೆ ನಾಗೇಂದ್ರಗೆ ಮಾಡಿದಂತೆ ನಿನ್ನ ಸ್ಥಾನಕ್ಕೂ ಕುತ್ತ ಬರಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರಂತೆ. ಅಲ್ಲದೆ, ಮಾಧ್ಯಮಗಳ ಮುಂದೆಯೂ ದರ್ಶನ್ ಪರವಾಗಿ ಹೇಳಿಕೆಗಳನ್ನು ಕೊಡದಂತೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಹತ್ಯೆ ಪ್ರಕರಣ: ದರ್ಶನ್‌, ಪವಿತ್ರಾ ಗೌಡ ಜತೆ ಎಲ್ಲ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು