Webdunia - Bharat's app for daily news and videos

Install App

ದರ್ಶನ್ ಕೇಸ್ ನಲ್ಲಿ ತಲೆ ಹಾಕದಂತೆ ಸಚಿವ ಜಮೀರ್ ಅಹ್ಮದ್ ಗೆ ಸಿಎಂ ಸಿದ್ದರಾಮಯ್ಯ ತಾಕೀತು

Krishnaveni K
ಬುಧವಾರ, 12 ಜೂನ್ 2024 (17:38 IST)
ಬೆಂಗಳೂರು: ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಪರವಾಗಿ ಕೇಸ್ ನಲ್ಲಿ ತಲೆ ಹಾಕದಂತೆ ಸಚಿವ ಜಮೀರ್ ಅಹ್ಮದ್ ಗೆ ಸಿಎಂ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.

ಸಚಿವ ಜಮೀರ್ ಅಹ್ಮದ್ ಜೊತೆಗೆ ದರ್ಶನ್ ಆತ್ಮೀಯ ಸಂಬಂಧವಿದೆ. ಈ ಹಿನ್ನಲೆಯಲ್ಲಿ ದರ್ಶನ್ ಬಂಧನವಾಗುತ್ತಿದ್ದಂತೇ ರಾಜ್ಯ ಸರ್ಕಾರದ ಸಚಿವರ ಪ್ರಭಾವದಿಂದ ಅವರು ಬಚಾವ್ ಆಗಬಹುದು ಎಂಬ ಕುಹುಕಗಳು ಕೇಳಿಬಂದಿದ್ದವು. ಆದರೆ ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಜಮೀರ್ ಗೆ ಕರೆ ಮಾಡಿ ಈ ವಿಚಾರದಲ್ಲಿ ತಲೆ ಹಾಕದಂತೆ ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಜಮೀರ್ ಪುತ್ರನ ಸಿನಿಮಾ ಪ್ರಚಾರ ಕಾರ್ಯಕ್ಕೆ ದರ್ಶನ್ ನೆರವಾಗಿದ್ದರು. ಅಲ್ಲದೆ, ಜಮೀರ್ ಮನೆಗೂ ದರ್ಶನ್ ಆಗಾಗ ಭೇಟಿ ನೀಡುತ್ತಿದ್ದರು. ಆದರೆ ಇದೀಗ ದರ್ಶನ್ ಮೇಲೆ ದಾಖಲಾಗಿರುವುದು ಹಲ್ಲೆ ಮತ್ತು ಹತ್ಯೆ ಪ್ರಕರಣ. ಈ ಪ್ರಕರಣದಲ್ಲಿ ಸಚಿವರೇನಾದರೂ ಒತ್ತಡ ಹಾಕಲು ಹೋದರೆ ಅದರಿಂದ ಸರ್ಕಾರಕ್ಕೇ ಕೆಟ್ಟ ಹೆಸರು.

ಹೀಗಾಗಿ ಕೇಸ್ ನಲ್ಲಿ ನಿನ್ನ ಹೆಸರು ಕೇಳಿಬಂದರೆ ಈ ಹಿಂದೆ ನಾಗೇಂದ್ರಗೆ ಮಾಡಿದಂತೆ ನಿನ್ನ ಸ್ಥಾನಕ್ಕೂ ಕುತ್ತ ಬರಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರಂತೆ. ಅಲ್ಲದೆ, ಮಾಧ್ಯಮಗಳ ಮುಂದೆಯೂ ದರ್ಶನ್ ಪರವಾಗಿ ಹೇಳಿಕೆಗಳನ್ನು ಕೊಡದಂತೆ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments